Homeರಾಷ್ಟ್ರೀಯಪುಲಿಟ್ಜರ್‌ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ‘ಸನ್ನಾ ಇರ್ಷಾದ್ ಮಟ್ಟೂ’ ವಿದೇಶ ಪ್ರಯಾಣಕ್ಕೆ ತಡೆ

ಪುಲಿಟ್ಜರ್‌ ವಿಜೇತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ‘ಸನ್ನಾ ಇರ್ಷಾದ್ ಮಟ್ಟೂ’ ವಿದೇಶ ಪ್ರಯಾಣಕ್ಕೆ ತಡೆ

ವಿದೇಶಕ್ಕೆ ತೆರಳಲು ಅನುಮತಿ ನೀಡದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಹೇಳಲಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ತನ್ನ ಫೋಟೊಗಳಿಗಾಗಿ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿ ವಿಜೇತರಾಗಿರುವ ಖ್ಯಾತ ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅವರನ್ನು ದೆಹಲಿಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿದೇಶಕ್ಕೆ ತೆರಳದಂತೆ ತಡೆದಿದ್ದಾರೆ ಎಂದು ಶನಿವಾರ ಆರೋಪಿಸಿದ್ದಾರೆ. ಮಾನ್ಯ ಮಾಡಲಾಗಿರುವ ಫ್ರೆಂಚ್ ವೀಸಾವನ್ನು ಹೊಂದಿದ್ದರೂ ದೆಹಲಿಯಿಂದ ಪ್ಯಾರಿಸ್‌ಗೆ ತೆರಳಲು ಪ್ರಯತ್ನಿಸುತ್ತಿರುವಾಗ ಅಧಿಕಾರಿಗಳು ತನ್ನನ್ನು ತಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಸೆರೆಂಡಿಪಿಟಿ ಆರ್ಲೆಸ್ ಅನುದಾನ-2020’ ರ 10 ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿ ಪುಸ್ತಕ ಬಿಡುಗಡೆ ಮತ್ತು ಛಾಯಾಗ್ರಹಣ ಪ್ರದರ್ಶನಕ್ಕಾಗಿ ಪ್ಯಾರಿಸ್‌ಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ ಎಂದು ಸನ್ನಾ ಅವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದೇಶಕ್ಕೆ ತೆರಳಲು ಅನುಮತಿ ನೀಡದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಹೇಳಲಿಲ್ಲ, ಆದರೆ ಸರಳವಾಗಿ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಹೇಳಿದರು ಎಂದು ಸನ್ನಾ ಹೇಳಿದ್ದಾರೆ.

ಸ್ವತಂತ್ರ ಛಾಯಾಗ್ರಾಹಕಿಯಾಗಿರುವ ಸನ್ನಾ ಅವರು 2022ರ ಮೇ ತಿಂಗಳಲ್ಲಿ ರಾಯಿಟರ್ಸ್ ಪ್ರಕಟಿಸಿದ ಅವರ ಚಿತ್ರಕ್ಕಾಗಿ ‘ವೈಶಿಷ್ಟ್ಯ ಛಾಯಾಗ್ರಹಣ ವಿಭಾಗ’ದಲ್ಲಿ ಪುಲಿಟ್ಜೆರ್ ಪ್ರಶಸ್ತಿಯನ್ನು ಗೆದ್ದಿದ್ದರು. ಭಾರತದಲ್ಲಿನ ಕೊರೊನಾ ಬಿಕ್ಕಟ್ಟಿನ ಚಿತ್ರಗಳನ್ನು ಹಿಡಿದಿದ್ದಕ್ಕಾಗಿ ಸನ್ನಾ ಅವರೊಂದಿಗೆ ದಿವಂಗತ ಡ್ಯಾನಿಶ್ ಸಿದ್ದಿಕಿ, ಅಮಿತ್ ದವೆ ಮತ್ತು ಅದ್ನಾನ್ ಅಬಿದಿ ಸೇರಿದ ರಾಯಿಟರ್ಸ್ ತಂಡ ಪ್ರಶಸ್ತಿ ವಿಜೇತರಾಗಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾನಿಲಯದಿಂದ ಕನ್ವರ್ಜೆಂಟ್ ಜರ್ನಲಿಸಂನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸನ್ನಾ, ಪ್ರಪಂಚದಾದ್ಯಂತದ ಹಲವಾರು ಮಳಿಗೆಗಳಲ್ಲಿ ತಮ್ಮ ಕೃತಿಗಳನ್ನು ಪ್ರಕಟಿಸಿದ್ದಾರೆ. 2021 ರಲ್ಲಿ, ಅವರಿಗೆ ಪ್ರತಿಷ್ಠಿತ ಮ್ಯಾಗ್ನಮ್ ಫೌಂಡೇಶನ್‌ನಲ್ಲಿ ಫೆಲೋಶಿಪ್ ನೀಡಲಾಯಿತು.

ಯಾವುದೇ ಮುನ್ಸೂಚನೆ ನೀಡದೆ ಕಾಶ್ಮೀರಿ ಪತ್ರಕರ್ತರನ್ನು ದೇಶ ತೊರೆಯದಂತೆ ತಡೆದಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2019 ರಲ್ಲಿ, ಕೇಂದ್ರ ಸರ್ಕಾರವು ಆರ್ಟಿಕಲ್ 370 ಅನ್ನು ವಾಪಾಸು ಪಡೆದ ಕೂಡಲೇ, ಪತ್ರಕರ್ತ-ಲೇಖಕ ಗೌಹರ್ ಗಿಲಾನಿ ಅವರನ್ನು ಕೂಡಾ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾನ್‌ಗೆ ಪ್ರಯಾಣಿಸುವುದನ್ನು ತಡೆಯಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...