Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...