Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...