Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...