Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...