Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...