Homeಅಂಕಣಗಳುರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
- Advertisement -

ಮುತ್ತುರಾಜ್ |

ಪುಲ್ವಾಮ ದಿ ಹಾರ್ಸ್ ರಿಯಾಲಿಟಿ! ಎಂಬ ಟೈಟಲ್‍ನಲ್ಲಿ ಪುಲ್ವಾಮ ಘಟನೆಯ ಸತ್ಯಾಸತ್ಯತೆಗಳ ಬಗ್ಗೆ ಅದರ ಸುತ್ತಾ ಎದ್ದಿರುವ ಪ್ರಶ್ನೆಗಳ ಕುರಿತು ಮಾತನಾಡಿದ ಯುವಕನೊಬ್ಬ ವಿಡಿಯೋವೊಂದನ್ನು ಮಾಡಿ, 15 ದಿನಗಳ ಹಿಂದೆ ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡುತ್ತಾನೆ. ಅದನ್ನು ಎಷ್ಟು ಜನ ವೀಕ್ಷಣೆ ಮಾಡಿದ್ದಾರೆ ಗೊತ್ತಾ? ಬರೋಬ್ಬರಿ 41 ಲಕ್ಷ ಆ ವಿಡಿಯೋ ವೀಕ್ಷಿಸುವುದಲ್ಲದೇ ಅದು ಭಾರತದಲ್ಲೇ #3 ಆಗಿ ಟ್ರೆಂಡಿಂಗ್ ಆಗುತ್ತದೆ. ಈ ರೀತಿಯ 144 ವಿಡಿಯೋಗಳನ್ನು ಇದುವರೆಗೂ ತನ್ನ ಯೂ ಟೂಬ್ ಚಾನಲ್‍ನಲ್ಲಿ ಪೋಸ್ಟ್ ಮಾಡಿರುವ ಕೇವಲ 24 ವರ್ಷದ ಈ ಯುವಕನ ಯೂ ಟ್ಯೂಬ್ ಚಾನಲ್ ಅನ್ನು ಜಗತ್ತಿನಾದ್ಯಂತ ಹದಿನಾರು ಲಕ್ಷಕ್ಕೂ ಹೆಚ್ಚು ಜನ ಫಾಲೋ ಮಾಡುತ್ತಿದ್ದಾರೆ ಅಂದರೆ ನೀವು ನಂಬಲೇಬೇಕು.
ಆತನ ಹೆಸರು ಧೃವ್ ರಾಠೀ. ಹರಿಯಾಣದಲ್ಲಿ ಹುಟ್ಟಿ ಪ್ಲಸ್ ಟು ವರೆಗಿನ ಶಿಕ್ಷಣವನ್ನು ಪಡೆದ ನಂತರ, ಜರ್ಮನಿಯಲ್ಲಿ ಬಿ.ಇ ಮೆಕಾನಿಕಲ್ ಇಂಜಿನಿಯರ್ ಮುಗಿಸಿ ಸದ್ಯ ಮಾಸ್ಟರ್ಸ್ ಇನ್ ರಿನ್ಯುಬಲ್ ಎನರ್ಜಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಓದಿನ ನಡುವೆಯೇ ಸುಳ್ಳು ಸುದ್ದಿಗಳನ್ನು ಬಯಲು ಮಾಡುವುದು, ಪರಿಸರದ ಜಾಗೃತಿ ಮೂಡಿಸುವುದು, ಸಾಮಾಜಿಕ, ರಾಜಕೀಯ, ಆರ್ಥಿಕ ವಿಶ್ಲೇಷಣೆಗಳ ಕುರಿತು ಮುಖ್ಯವಾಗಿ ಮುಖ್ಯವಾಹಿನಿ ಮಾಧ್ಯಮ ಮಾತನಾಡದ ವಿಚಾರಗಳ ಕುರಿತು ವಿಡಿಯೋ ಮಾಡುವುದು ಇವನ ಕಾಯಕ. ಈತನ ವಿಡಿಯೋಗಳು ಲಕ್ಷಾಂತರ ಸಂಖ್ಯೆಯಲ್ಲಿ ವೀಕ್ಷಿಸಲ್ಪಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಈತನ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿಯುತ್ತಿದೆ.
ಈತನ ವಿಶೇಷತೆಯೇನು?
ಧೃವ್ ರಾಠೀ ವಿಡಿಯೋಗಳ ಬಗ್ಗೆ ಇಷ್ಟು ಮೆಚ್ಚುಗೆ ಬರಲು ಹಲವು ಕಾರಣಗಳಿವೆ. ಇಂದು ಮುಖ್ಯವಾಹಿನಿ ಮಾಧ್ಯಮಗಳೇ ಕೆಲವು ಪಕ್ಷಗಳ ವಕ್ತಾರರಂತೆ ವರ್ತಿಸಿ ನಾಚಿಕೆ ಮಾನಮರ್ಯಾದೆ ಇಲ್ಲದೇ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿರುವುದರಿಂದ ಬಹಳಷ್ಟು ಪ್ರಜ್ಞಾವಂತರಿಗೆ ಪರ್ಯಾಯ ನಂಬಿಕಾರ್ಹ ಮೂಲಗಳ ಅಗತ್ಯ ಬಿದ್ದಿದೆ. ಅಂತಹ ನಂಬಿಕಾರ್ಹ ಮೂಲಗಳಾಗಿ ಈಗಾಗಲೇ ಪ್ರತೀಕ್ ಸಿನ್ಹಾ ನಡೆಸುವ ಆಲ್ಟ್ ನ್ಯೂಸ್, ಸಿದ್ದಾರ್ಥ್ ವರದರಾಜನ್‍ರವರ ವೈರ್.ಇನ್, ನ್ಯೂಸ್ ಲ್ಯಾಂಡ್ರಿ ಮುಂತಾದ ಜಾಲತಾಣಗಳು ಕೆಲಸ ಮಾಡುತ್ತಿವೆ. ಇವುಗಳ ಜೊತೆಗೆ ಯಾವುದೇ ವಿಷಯದ ಬಗ್ಗೆ ಎಲ್ಲಾ ಕೋನಗಳಿಂದ ಸಾಕಷ್ಟು ಅಧ್ಯಯನ ನಡೆಸಿ, ಅತ್ಯಂತ ಕಡಿಮೆ ಪದಗಳಲ್ಲಿ ಸುಲಲಿತವಾಗಿ ಮತ್ತು ಸರಳವಾಗಿ ಅಷ್ಟೇ ಪರಿಣಾಮಕಾರಿಯಾಗಿ ಹಿಂದಿ ಭಾಷೆಯಲ್ಲಿ ಬಹಳ ಆತ್ಮವಿಶ್ವಾಸದಿಂದ ಮಾತನಾಡಿ ವಿಡಿಯೋ ಎಡಿಟ್ ಮಾಡುವುದು ಧೃವ್ ರಾಠೀಯ ಅಗ್ಗಳಿಕೆ.
ಪೂರ್ವಗ್ರಹಪೀಡಿತರಾಗದೇ ಎಲ್ಲಾ ಸಿದ್ಧಾಂತಗಳನ್ನು ನೋಡುವುದು, ಯಾವುದೇ ಒಂದು ಪಕ್ಷಕ್ಕೆ ಅಂಟಿಕೊಳ್ಳದೇ ಎಲ್ಲಾ ಪಕ್ಷಗಳನ್ನು ಸಮಾನವಾಗಿ ವಿಮರ್ಶೆ ಮಾಡುವುದು, ಆ ಪಕ್ಷಗಳ ಮಾಡುವ ಒಳ್ಳೇಯ ಕೆಲಸಗಳನ್ನು ಮುಕ್ತಕಂಠದಿಂದ ಶ್ಲಾಘಿಸುವುದು ಧೃವ್ ರಾಠೀಯ ವಿಶೇಷತೆ. ಒಂದು ವಿಡಿಯೋ ಮಾಡಲು ಹೆಚ್ಚು ಕಮ್ಮಿ ಒಂದು ವಾರದಷ್ಟು ಸಮಯ ತೆಗೆದುಕೊಳ್ಳುವ ಈತ ಅರ್ಧಕ್ಕಿಂತ ಹೆಚ್ಚಿನ ಸಮಯವನ್ನು ಆ ವಿಷಯದ ಅಧ್ಯಯನಕ್ಕೆ ಮೀಸಲಿಡುತ್ತಾನೆ. ತನ್ನ ಐ ಫೋನ್ 8 ರಲ್ಲಿ ಸ್ವತಃ ರೆಕಾರ್ಡ್ ಮಾಡಿ ತಾನೇ ಎಡಿಟ್ ಮಾಡಿ ವಿಡಿಯೋ ತಯಾರಿಸುವುದು ಈತನ ಕುಶಲತೆಗೆ ಮತ್ತೊಂದು ಗರಿ. ವಿಡಿಯೋದ ಕ್ವಾಲಿಟಿ, ತನ್ನ ಸಮಚಿತ್ತದ ಮಾತಿಗೆ ಪೂರಕ ದಾಖಲೆಗಳ ಸ್ಲೈಡ್‍ಗಳು, ಸರಾಸರಿ 10 ನಿಮಿಷ ವಿಡಿಯೋ ಮಾಡುವುದು ಈ ಲಕ್ಷಣಗಳು ನೋಡುಗರಿಗೆ ಹೆಚ್ಚು ಇಷ್ಟವಾಗುತ್ತವೆ ಎನ್ನುವ ಸತ್ಯ ಧೃವ್‍ಗೆ ತಿಳಿದಿದೆ.
ಸಾರ್ವತ್ರಿಕ ಶಿಕ್ಷಣ, ಉತ್ತಮ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಕಾಳಜಿ ಈ ಮೂರು ಮುಖ್ಯ ವಿಷಯಗಳಿಗೆ ಒತ್ತುಕೊಡಬೇಕು ಎಂಬುದು ಈತನ ಆಶಯ. ಸಾಮಾಜಿಕ ಆರ್ಥಿಕ ಸರ್ವೇಗಳ ಆಧಾರದಲ್ಲಿ ಭಾರತದಲ್ಲಿ ಉತ್ತಮ ರಾಜ್ಯ ಯಾವುದು? ಪ್ರಪಂಚದಲ್ಲಿ ಉತ್ತಮ ರಾಷ್ಟ್ರ ಯಾವುದು ಎಂಬುದರ ಕುರಿತು ಉತ್ತಮ ವಿಶ್ಲೇಷಣೆಯ ವಿಡಿಯೋಗಳು ಈತನ ಬುಟ್ಟಿಯಲ್ಲಿವೆ.
ಬಹಳಷ್ಟು ಜನ ಇಂದು ಯಾವುದೇ ವಿಷಯದ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಬೇಕಾದರೆ ಸಾಕಷ್ಟು ಅಧ್ಯಯನ ನಡೆಸಬೇಕಾಗುತ್ತದೆ. ಅಷ್ಟು ಕಷ್ಟ ತೆಗೆದುಕೊಳ್ಳುವ ಬದಲು ಈತನ ವಿಡಿಯೋ ನೋಡಿದರೆ ಸಾಕು ಎನ್ನುವವರಿದ್ದಾರೆ. 2013ರಿಂದ ಈ ಯೂಟ್ಯೂಬ್ ಚಾನಲ್ ನಡೆಸುತ್ತಿರುವ ಧೃವ್ ರಾಠೀ ಪ್ರಚಲಿತ ವಿಷಯಗಳ ಬಗ್ಗೆಯೇ ಹೆಚ್ಚು ಹೆಚ್ಚು ವಿಡಿಯೋಗಳನ್ನು ಮಾಡಿದ್ದಾರೆ. ಅಂದರೆ ಸಹಜವಾಗಿ ಪ್ರಸ್ತುತ ಮೋದಿ ಸರ್ಕಾರದ ಸುಳ್ಳುಗಳನ್ನು ಆಧಾರ ಸಮೇತ ಬಯಲು ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಭಕ್ತರು ಮಾಡುವ ಟ್ರೋಲ್‍ಗಳಿಗೆ ತಲೆಕೆಡಿಸಿಕೊಳ್ಳದ ಧೃವ್ ನಾನು ಬಾಬರ್ ಏನು ಮಾಡಿದ, ನೆಹರು ಏನು ಮಾಡಿದರು ಎಂಬುದರ ಮೇಲೆ ಸಮಯ ವ್ಯರ್ಥ ಮಾಡುವುದಿಲ್ಲ. ಮುಂದೆ ಯಾವುದೇ ಸರ್ಕಾರ ಬಂದರೂ ಅವರ ಮಾಡುವ ಕೆಲಸಗಳ ಆಧಾರದ ಮೇಲೆ ಒಬ್ಬ ಪ್ರಜೆಯಾಗಿ ಸರಿ ತಪ್ಪುಗಳನ್ನು ವಿಶ್ಲೇಷಿಸುತ್ತೇನೆ ಅನ್ನುತ್ತಾರೆ.
ಈತನಿಗೆ ಯಾರು ಫಂಡ್ ಮಾಡುತ್ತಾರೆ?
ಧೃವ್‍ನ ಎಲ್ಲಾ ವಿಡಿಯೋಗಳ ಕಮೆಂಟ್‍ಗಳಲ್ಲಿ ಒಂದು ಸಾಮಾನ್ಯವಾದುದಿರುತ್ತದೆ. ಅದು ಈತನಿಗೆ ಯಾರು ಫಂಡ್ ಮಾಡುತ್ತಾರೆ ಎಂಬುದಾಗಿರುತ್ತದೆ. ಈತನ ಮಾತುಗಳನ್ನು ಸಹಿಸದ ಕೆಲವರು ಇವನಿಗೆ ಕಾಂಗ್ರೆಸ್ ಫಂಡ್ ಮಾಡುತ್ತದೆ, ಆಮ್ ಆದ್ಮಿ ಪಾರ್ಟಿ ಫಂಡ್ ಮಾಡುತ್ತದೆ ಎಂದು ಆರೋಪ ಮಾಡುತ್ತಾರೆ. ಬಿಬಿಸಿ ಸೇರಿದಂತೆ ಹಲವು ವಾಹಿನಿಗಳಿಗೆ ನೀಡಿರುವ ಸಂದರ್ಶನದಲ್ಲಿ ಇದಕ್ಕೆ ಧೃವ್ ಸ್ಪಷ್ಟನೆ ನೀಡಿದ್ದಾರೆ. ಮೊದಲನೆಯದಾಗಿ ತನ್ನ ಓದಿಗಂತ ಆತನ ಕುಟುಂಬ ಹಣ ನೀಡಿದರೆ, ಆತನ ವಿಡಿಯೋಗಳಲ್ಲಿ ಬರುವ ಜಾಹೀರಾತು ವೀಕ್ಷಣೆಯ ಆಧಾರದಲ್ಲಿ ಯೂಟ್ಯೂಬ್ ಹಣ ನೀಡುತ್ತದೆ. (ಸರಾಸರಿ ಒಂದು ಲಕ್ಷ ಜಾಹೀರಾತು ವಿಡಿಯೋ ಮೇಲೆ ಕ್ಲಿಕ್ ಮಾಡಿದರೆ 100 ಡಾಲರ್) ಜೊತೆಗೆ ತನ್ನ ಕೆಲಸ ಇಷ್ಟವಾದಲ್ಲಿ ಪೇಟ್ರಿಯನ್.ಕಾಮ್ ಮೂಲಕ ಹಣ ನೀಡಿ ಬೆಂಬಲಿಸಿ ಎಂದು ಧೃವ್ ಮನವಿ ಕೂಡ ಮಾಡುತ್ತಾನೆ. ಯಾವ ಪಕ್ಷಗಳಿಂದಲೂ ಹಣ ಪಡೆಯಬಾರದು ಮತ್ತು ಜನರ ಹಣದಲ್ಲಿ ತನ್ನ ಕೆಲಸ ನಡೆಯಬೇಕು ಎಂಬುದು ಆತನ ಇಂಗಿತ.
ಬೆಂಬಲದ ಮಹಾಪೂರ
ಅತ್ಯಂತ ಕಡಿಮೆ ವಯಸ್ಸಿನಲ್ಲಿ ದೇಶಕ್ಕೆ ತುರ್ತಾಗಿರುವ ಅತಿ ಮಹತ್ವದ ಕೆಲಸ ಮಾಡುತ್ತಿರುವುದಕ್ಕಾಗಿ ಧೃವ್‍ರಾಠೀಗೆ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಎನ್‍ಡಿಟಿವಿಯ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ತನ್ನ ಪ್ರೈಮ್‍ಟೈಮ್‍ನಲ್ಲಿ ಈತನ ಸಂದರ್ಶನ ಮಾಡಿದ್ದಾರೆ. ಉಳಿದಂತೆ ಖ್ಯಾತ ಪತ್ರಕರ್ತೆ ಮತ್ತು ಸಂಪಾದಕಿ ಫಯಾ ಡಿಸೋಜ, ಬಿಬಿಸಿ, ನ್ಯೂಸ್‍ಲಾಂಡ್ರಿ ಮುಂತಾದವರು ಈತನ ಸಂದರ್ಶನಗಳನ್ನು ಪ್ರಕಟಿಸಿದ್ದಾರೆ. ತನ್ನ ವಿಡಿಯೋಗಳಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಖ್ಯಾತಿಯಾಗಿರುವ ಬ್ರುಟ್ ಇಂಡಿಯಾ ಹಲವು ಜಾಗೃತಿ ವಿಡಿಯೋಗಳನ್ನು ಧೃವ್ ಸಹಯೋಗದಲ್ಲಿ ತಯಾರಿಸುತ್ತಿದೆ.
ಧೃವ್ ರಾಠೀ ಮಾತ್ರವಲ್ಲ
ಈ ರೀತಿ ಯೂಟ್ಯೂಬ್ ಚಾನಲ್ ವಿಡಿಯೋಗಳ ಮೂಲಕ ಜಾಗೃತಿ ಮೂಡಿಸುತ್ತಿರುವುದು ಧೃವ್ ಮಾತ್ರವಲ್ಲ. ನೂರಾರು ಜನ ಈ ರೀತಿಯ ಕೆಲಸದಲ್ಲಿ ತೊಡಗಿದ್ದಾರೆ. ಜೆಎನ್‍ಯು ಪ್ರಕರಣ ಮೂಲಕ ಬೆಳಕಿಗೆ ಬಂದು ತನ್ನ ಪ್ರಖರ ಭಾಷಣಗಳ ಮೂಲಕ ಪ್ರಸಿದ್ದರಾಗಿರುವ ಕನ್ನಯ್ಯ ಕುಮಾರ್ ಸಹ ತನ್ನೆಲ್ಲಾ ಭಾಷಣಗಳನ್ನು ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡುತ್ತಾರೆ. ಸದ್ಯಕ್ಕೆ 10 ಲಕ್ಷ ಜನ ಇವರನ್ನು ಫಾಲೋ ಮಾಡುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಈತನ ಭಾಷಣಗಳನ್ನು ವೀಕ್ಷಿಸಿದ್ದಾರೆ. ಆಕಾಶ್ ಬ್ಯಾನರ್ಜಿ ಎಂಬುವವರು ಸಹ ತಮ್ಮ ವಿಶಿಷ್ಟ ಮ್ಯಾನರಿಸಂನ ಮೂಲಕ ಟ್ರೋಲ್ ಮಾಡುತ್ತಾರೆ. ಟಿಆರ್‍ಪಿ ಹಿಂದೆ ಬಿದ್ದು ಬರೀ ಸುಳ್ಳು ಹೇಳುವ ಟಿವಿ ಚಾನಲ್‍ಗಳ ನಡುವೆ ಇಂತಹವರ ಪ್ರಯತ್ನಗಳು ಖಂಡಿತ ಮೆಚ್ಚತಕ್ಕದ್ದು. ಈಗಲೇ ಯೂಟ್ಯೂಬ್ ಒಪನ್ ಮಾಡಿ ವಿಡಿಯೋ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...