Homeಅಂಕಣಗಳುರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

- Advertisement -
- Advertisement -

ಮುತ್ತುರಾಜ್ |

ಪುಲ್ವಾಮ ದಿ ಹಾರ್ಸ್ ರಿಯಾಲಿಟಿ! ಎಂಬ ಟೈಟಲ್‍ನಲ್ಲಿ ಪುಲ್ವಾಮ ಘಟನೆಯ ಸತ್ಯಾಸತ್ಯತೆಗಳ ಬಗ್ಗೆ ಅದರ ಸುತ್ತಾ ಎದ್ದಿರುವ ಪ್ರಶ್ನೆಗಳ ಕುರಿತು ಮಾತನಾಡಿದ ಯುವಕನೊಬ್ಬ ವಿಡಿಯೋವೊಂದನ್ನು ಮಾಡಿ, 15 ದಿನಗಳ ಹಿಂದೆ ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡುತ್ತಾನೆ. ಅದನ್ನು ಎಷ್ಟು ಜನ ವೀಕ್ಷಣೆ ಮಾಡಿದ್ದಾರೆ ಗೊತ್ತಾ? ಬರೋಬ್ಬರಿ 41 ಲಕ್ಷ ಆ ವಿಡಿಯೋ ವೀಕ್ಷಿಸುವುದಲ್ಲದೇ ಅದು ಭಾರತದಲ್ಲೇ #3 ಆಗಿ ಟ್ರೆಂಡಿಂಗ್ ಆಗುತ್ತದೆ. ಈ ರೀತಿಯ 144 ವಿಡಿಯೋಗಳನ್ನು ಇದುವರೆಗೂ ತನ್ನ ಯೂ ಟೂಬ್ ಚಾನಲ್‍ನಲ್ಲಿ ಪೋಸ್ಟ್ ಮಾಡಿರುವ ಕೇವಲ 24 ವರ್ಷದ ಈ ಯುವಕನ ಯೂ ಟ್ಯೂಬ್ ಚಾನಲ್ ಅನ್ನು ಜಗತ್ತಿನಾದ್ಯಂತ ಹದಿನಾರು ಲಕ್ಷಕ್ಕೂ ಹೆಚ್ಚು ಜನ ಫಾಲೋ ಮಾಡುತ್ತಿದ್ದಾರೆ ಅಂದರೆ ನೀವು ನಂಬಲೇಬೇಕು.
ಆತನ ಹೆಸರು ಧೃವ್ ರಾಠೀ. ಹರಿಯಾಣದಲ್ಲಿ ಹುಟ್ಟಿ ಪ್ಲಸ್ ಟು ವರೆಗಿನ ಶಿಕ್ಷಣವನ್ನು ಪಡೆದ ನಂತರ, ಜರ್ಮನಿಯಲ್ಲಿ ಬಿ.ಇ ಮೆಕಾನಿಕಲ್ ಇಂಜಿನಿಯರ್ ಮುಗಿಸಿ ಸದ್ಯ ಮಾಸ್ಟರ್ಸ್ ಇನ್ ರಿನ್ಯುಬಲ್ ಎನರ್ಜಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಓದಿನ ನಡುವೆಯೇ ಸುಳ್ಳು ಸುದ್ದಿಗಳನ್ನು ಬಯಲು ಮಾಡುವುದು, ಪರಿಸರದ ಜಾಗೃತಿ ಮೂಡಿಸುವುದು, ಸಾಮಾಜಿಕ, ರಾಜಕೀಯ, ಆರ್ಥಿಕ ವಿಶ್ಲೇಷಣೆಗಳ ಕುರಿತು ಮುಖ್ಯವಾಗಿ ಮುಖ್ಯವಾಹಿನಿ ಮಾಧ್ಯಮ ಮಾತನಾಡದ ವಿಚಾರಗಳ ಕುರಿತು ವಿಡಿಯೋ ಮಾಡುವುದು ಇವನ ಕಾಯಕ. ಈತನ ವಿಡಿಯೋಗಳು ಲಕ್ಷಾಂತರ ಸಂಖ್ಯೆಯಲ್ಲಿ ವೀಕ್ಷಿಸಲ್ಪಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಈತನ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿಯುತ್ತಿದೆ.
ಈತನ ವಿಶೇಷತೆಯೇನು?
ಧೃವ್ ರಾಠೀ ವಿಡಿಯೋಗಳ ಬಗ್ಗೆ ಇಷ್ಟು ಮೆಚ್ಚುಗೆ ಬರಲು ಹಲವು ಕಾರಣಗಳಿವೆ. ಇಂದು ಮುಖ್ಯವಾಹಿನಿ ಮಾಧ್ಯಮಗಳೇ ಕೆಲವು ಪಕ್ಷಗಳ ವಕ್ತಾರರಂತೆ ವರ್ತಿಸಿ ನಾಚಿಕೆ ಮಾನಮರ್ಯಾದೆ ಇಲ್ಲದೇ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿರುವುದರಿಂದ ಬಹಳಷ್ಟು ಪ್ರಜ್ಞಾವಂತರಿಗೆ ಪರ್ಯಾಯ ನಂಬಿಕಾರ್ಹ ಮೂಲಗಳ ಅಗತ್ಯ ಬಿದ್ದಿದೆ. ಅಂತಹ ನಂಬಿಕಾರ್ಹ ಮೂಲಗಳಾಗಿ ಈಗಾಗಲೇ ಪ್ರತೀಕ್ ಸಿನ್ಹಾ ನಡೆಸುವ ಆಲ್ಟ್ ನ್ಯೂಸ್, ಸಿದ್ದಾರ್ಥ್ ವರದರಾಜನ್‍ರವರ ವೈರ್.ಇನ್, ನ್ಯೂಸ್ ಲ್ಯಾಂಡ್ರಿ ಮುಂತಾದ ಜಾಲತಾಣಗಳು ಕೆಲಸ ಮಾಡುತ್ತಿವೆ. ಇವುಗಳ ಜೊತೆಗೆ ಯಾವುದೇ ವಿಷಯದ ಬಗ್ಗೆ ಎಲ್ಲಾ ಕೋನಗಳಿಂದ ಸಾಕಷ್ಟು ಅಧ್ಯಯನ ನಡೆಸಿ, ಅತ್ಯಂತ ಕಡಿಮೆ ಪದಗಳಲ್ಲಿ ಸುಲಲಿತವಾಗಿ ಮತ್ತು ಸರಳವಾಗಿ ಅಷ್ಟೇ ಪರಿಣಾಮಕಾರಿಯಾಗಿ ಹಿಂದಿ ಭಾಷೆಯಲ್ಲಿ ಬಹಳ ಆತ್ಮವಿಶ್ವಾಸದಿಂದ ಮಾತನಾಡಿ ವಿಡಿಯೋ ಎಡಿಟ್ ಮಾಡುವುದು ಧೃವ್ ರಾಠೀಯ ಅಗ್ಗಳಿಕೆ.
ಪೂರ್ವಗ್ರಹಪೀಡಿತರಾಗದೇ ಎಲ್ಲಾ ಸಿದ್ಧಾಂತಗಳನ್ನು ನೋಡುವುದು, ಯಾವುದೇ ಒಂದು ಪಕ್ಷಕ್ಕೆ ಅಂಟಿಕೊಳ್ಳದೇ ಎಲ್ಲಾ ಪಕ್ಷಗಳನ್ನು ಸಮಾನವಾಗಿ ವಿಮರ್ಶೆ ಮಾಡುವುದು, ಆ ಪಕ್ಷಗಳ ಮಾಡುವ ಒಳ್ಳೇಯ ಕೆಲಸಗಳನ್ನು ಮುಕ್ತಕಂಠದಿಂದ ಶ್ಲಾಘಿಸುವುದು ಧೃವ್ ರಾಠೀಯ ವಿಶೇಷತೆ. ಒಂದು ವಿಡಿಯೋ ಮಾಡಲು ಹೆಚ್ಚು ಕಮ್ಮಿ ಒಂದು ವಾರದಷ್ಟು ಸಮಯ ತೆಗೆದುಕೊಳ್ಳುವ ಈತ ಅರ್ಧಕ್ಕಿಂತ ಹೆಚ್ಚಿನ ಸಮಯವನ್ನು ಆ ವಿಷಯದ ಅಧ್ಯಯನಕ್ಕೆ ಮೀಸಲಿಡುತ್ತಾನೆ. ತನ್ನ ಐ ಫೋನ್ 8 ರಲ್ಲಿ ಸ್ವತಃ ರೆಕಾರ್ಡ್ ಮಾಡಿ ತಾನೇ ಎಡಿಟ್ ಮಾಡಿ ವಿಡಿಯೋ ತಯಾರಿಸುವುದು ಈತನ ಕುಶಲತೆಗೆ ಮತ್ತೊಂದು ಗರಿ. ವಿಡಿಯೋದ ಕ್ವಾಲಿಟಿ, ತನ್ನ ಸಮಚಿತ್ತದ ಮಾತಿಗೆ ಪೂರಕ ದಾಖಲೆಗಳ ಸ್ಲೈಡ್‍ಗಳು, ಸರಾಸರಿ 10 ನಿಮಿಷ ವಿಡಿಯೋ ಮಾಡುವುದು ಈ ಲಕ್ಷಣಗಳು ನೋಡುಗರಿಗೆ ಹೆಚ್ಚು ಇಷ್ಟವಾಗುತ್ತವೆ ಎನ್ನುವ ಸತ್ಯ ಧೃವ್‍ಗೆ ತಿಳಿದಿದೆ.
ಸಾರ್ವತ್ರಿಕ ಶಿಕ್ಷಣ, ಉತ್ತಮ ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಕಾಳಜಿ ಈ ಮೂರು ಮುಖ್ಯ ವಿಷಯಗಳಿಗೆ ಒತ್ತುಕೊಡಬೇಕು ಎಂಬುದು ಈತನ ಆಶಯ. ಸಾಮಾಜಿಕ ಆರ್ಥಿಕ ಸರ್ವೇಗಳ ಆಧಾರದಲ್ಲಿ ಭಾರತದಲ್ಲಿ ಉತ್ತಮ ರಾಜ್ಯ ಯಾವುದು? ಪ್ರಪಂಚದಲ್ಲಿ ಉತ್ತಮ ರಾಷ್ಟ್ರ ಯಾವುದು ಎಂಬುದರ ಕುರಿತು ಉತ್ತಮ ವಿಶ್ಲೇಷಣೆಯ ವಿಡಿಯೋಗಳು ಈತನ ಬುಟ್ಟಿಯಲ್ಲಿವೆ.
ಬಹಳಷ್ಟು ಜನ ಇಂದು ಯಾವುದೇ ವಿಷಯದ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಬೇಕಾದರೆ ಸಾಕಷ್ಟು ಅಧ್ಯಯನ ನಡೆಸಬೇಕಾಗುತ್ತದೆ. ಅಷ್ಟು ಕಷ್ಟ ತೆಗೆದುಕೊಳ್ಳುವ ಬದಲು ಈತನ ವಿಡಿಯೋ ನೋಡಿದರೆ ಸಾಕು ಎನ್ನುವವರಿದ್ದಾರೆ. 2013ರಿಂದ ಈ ಯೂಟ್ಯೂಬ್ ಚಾನಲ್ ನಡೆಸುತ್ತಿರುವ ಧೃವ್ ರಾಠೀ ಪ್ರಚಲಿತ ವಿಷಯಗಳ ಬಗ್ಗೆಯೇ ಹೆಚ್ಚು ಹೆಚ್ಚು ವಿಡಿಯೋಗಳನ್ನು ಮಾಡಿದ್ದಾರೆ. ಅಂದರೆ ಸಹಜವಾಗಿ ಪ್ರಸ್ತುತ ಮೋದಿ ಸರ್ಕಾರದ ಸುಳ್ಳುಗಳನ್ನು ಆಧಾರ ಸಮೇತ ಬಯಲು ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಭಕ್ತರು ಮಾಡುವ ಟ್ರೋಲ್‍ಗಳಿಗೆ ತಲೆಕೆಡಿಸಿಕೊಳ್ಳದ ಧೃವ್ ನಾನು ಬಾಬರ್ ಏನು ಮಾಡಿದ, ನೆಹರು ಏನು ಮಾಡಿದರು ಎಂಬುದರ ಮೇಲೆ ಸಮಯ ವ್ಯರ್ಥ ಮಾಡುವುದಿಲ್ಲ. ಮುಂದೆ ಯಾವುದೇ ಸರ್ಕಾರ ಬಂದರೂ ಅವರ ಮಾಡುವ ಕೆಲಸಗಳ ಆಧಾರದ ಮೇಲೆ ಒಬ್ಬ ಪ್ರಜೆಯಾಗಿ ಸರಿ ತಪ್ಪುಗಳನ್ನು ವಿಶ್ಲೇಷಿಸುತ್ತೇನೆ ಅನ್ನುತ್ತಾರೆ.
ಈತನಿಗೆ ಯಾರು ಫಂಡ್ ಮಾಡುತ್ತಾರೆ?
ಧೃವ್‍ನ ಎಲ್ಲಾ ವಿಡಿಯೋಗಳ ಕಮೆಂಟ್‍ಗಳಲ್ಲಿ ಒಂದು ಸಾಮಾನ್ಯವಾದುದಿರುತ್ತದೆ. ಅದು ಈತನಿಗೆ ಯಾರು ಫಂಡ್ ಮಾಡುತ್ತಾರೆ ಎಂಬುದಾಗಿರುತ್ತದೆ. ಈತನ ಮಾತುಗಳನ್ನು ಸಹಿಸದ ಕೆಲವರು ಇವನಿಗೆ ಕಾಂಗ್ರೆಸ್ ಫಂಡ್ ಮಾಡುತ್ತದೆ, ಆಮ್ ಆದ್ಮಿ ಪಾರ್ಟಿ ಫಂಡ್ ಮಾಡುತ್ತದೆ ಎಂದು ಆರೋಪ ಮಾಡುತ್ತಾರೆ. ಬಿಬಿಸಿ ಸೇರಿದಂತೆ ಹಲವು ವಾಹಿನಿಗಳಿಗೆ ನೀಡಿರುವ ಸಂದರ್ಶನದಲ್ಲಿ ಇದಕ್ಕೆ ಧೃವ್ ಸ್ಪಷ್ಟನೆ ನೀಡಿದ್ದಾರೆ. ಮೊದಲನೆಯದಾಗಿ ತನ್ನ ಓದಿಗಂತ ಆತನ ಕುಟುಂಬ ಹಣ ನೀಡಿದರೆ, ಆತನ ವಿಡಿಯೋಗಳಲ್ಲಿ ಬರುವ ಜಾಹೀರಾತು ವೀಕ್ಷಣೆಯ ಆಧಾರದಲ್ಲಿ ಯೂಟ್ಯೂಬ್ ಹಣ ನೀಡುತ್ತದೆ. (ಸರಾಸರಿ ಒಂದು ಲಕ್ಷ ಜಾಹೀರಾತು ವಿಡಿಯೋ ಮೇಲೆ ಕ್ಲಿಕ್ ಮಾಡಿದರೆ 100 ಡಾಲರ್) ಜೊತೆಗೆ ತನ್ನ ಕೆಲಸ ಇಷ್ಟವಾದಲ್ಲಿ ಪೇಟ್ರಿಯನ್.ಕಾಮ್ ಮೂಲಕ ಹಣ ನೀಡಿ ಬೆಂಬಲಿಸಿ ಎಂದು ಧೃವ್ ಮನವಿ ಕೂಡ ಮಾಡುತ್ತಾನೆ. ಯಾವ ಪಕ್ಷಗಳಿಂದಲೂ ಹಣ ಪಡೆಯಬಾರದು ಮತ್ತು ಜನರ ಹಣದಲ್ಲಿ ತನ್ನ ಕೆಲಸ ನಡೆಯಬೇಕು ಎಂಬುದು ಆತನ ಇಂಗಿತ.
ಬೆಂಬಲದ ಮಹಾಪೂರ
ಅತ್ಯಂತ ಕಡಿಮೆ ವಯಸ್ಸಿನಲ್ಲಿ ದೇಶಕ್ಕೆ ತುರ್ತಾಗಿರುವ ಅತಿ ಮಹತ್ವದ ಕೆಲಸ ಮಾಡುತ್ತಿರುವುದಕ್ಕಾಗಿ ಧೃವ್‍ರಾಠೀಗೆ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಎನ್‍ಡಿಟಿವಿಯ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ತನ್ನ ಪ್ರೈಮ್‍ಟೈಮ್‍ನಲ್ಲಿ ಈತನ ಸಂದರ್ಶನ ಮಾಡಿದ್ದಾರೆ. ಉಳಿದಂತೆ ಖ್ಯಾತ ಪತ್ರಕರ್ತೆ ಮತ್ತು ಸಂಪಾದಕಿ ಫಯಾ ಡಿಸೋಜ, ಬಿಬಿಸಿ, ನ್ಯೂಸ್‍ಲಾಂಡ್ರಿ ಮುಂತಾದವರು ಈತನ ಸಂದರ್ಶನಗಳನ್ನು ಪ್ರಕಟಿಸಿದ್ದಾರೆ. ತನ್ನ ವಿಡಿಯೋಗಳಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಖ್ಯಾತಿಯಾಗಿರುವ ಬ್ರುಟ್ ಇಂಡಿಯಾ ಹಲವು ಜಾಗೃತಿ ವಿಡಿಯೋಗಳನ್ನು ಧೃವ್ ಸಹಯೋಗದಲ್ಲಿ ತಯಾರಿಸುತ್ತಿದೆ.
ಧೃವ್ ರಾಠೀ ಮಾತ್ರವಲ್ಲ
ಈ ರೀತಿ ಯೂಟ್ಯೂಬ್ ಚಾನಲ್ ವಿಡಿಯೋಗಳ ಮೂಲಕ ಜಾಗೃತಿ ಮೂಡಿಸುತ್ತಿರುವುದು ಧೃವ್ ಮಾತ್ರವಲ್ಲ. ನೂರಾರು ಜನ ಈ ರೀತಿಯ ಕೆಲಸದಲ್ಲಿ ತೊಡಗಿದ್ದಾರೆ. ಜೆಎನ್‍ಯು ಪ್ರಕರಣ ಮೂಲಕ ಬೆಳಕಿಗೆ ಬಂದು ತನ್ನ ಪ್ರಖರ ಭಾಷಣಗಳ ಮೂಲಕ ಪ್ರಸಿದ್ದರಾಗಿರುವ ಕನ್ನಯ್ಯ ಕುಮಾರ್ ಸಹ ತನ್ನೆಲ್ಲಾ ಭಾಷಣಗಳನ್ನು ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡುತ್ತಾರೆ. ಸದ್ಯಕ್ಕೆ 10 ಲಕ್ಷ ಜನ ಇವರನ್ನು ಫಾಲೋ ಮಾಡುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಈತನ ಭಾಷಣಗಳನ್ನು ವೀಕ್ಷಿಸಿದ್ದಾರೆ. ಆಕಾಶ್ ಬ್ಯಾನರ್ಜಿ ಎಂಬುವವರು ಸಹ ತಮ್ಮ ವಿಶಿಷ್ಟ ಮ್ಯಾನರಿಸಂನ ಮೂಲಕ ಟ್ರೋಲ್ ಮಾಡುತ್ತಾರೆ. ಟಿಆರ್‍ಪಿ ಹಿಂದೆ ಬಿದ್ದು ಬರೀ ಸುಳ್ಳು ಹೇಳುವ ಟಿವಿ ಚಾನಲ್‍ಗಳ ನಡುವೆ ಇಂತಹವರ ಪ್ರಯತ್ನಗಳು ಖಂಡಿತ ಮೆಚ್ಚತಕ್ಕದ್ದು. ಈಗಲೇ ಯೂಟ್ಯೂಬ್ ಒಪನ್ ಮಾಡಿ ವಿಡಿಯೋ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...