Homeಮುಖಪುಟಪುಲ್ವಾಮಾ ದಾಳಿಗೆ ಮೋದಿ ಸರ್ಕಾರದ ಲೋಪವೇ ಕಾರಣ: ರಾಹುಲ್ ಸಂದರ್ಶನದಲ್ಲಿ ಮಲಿಕ್ ಹೇಳಿಕೆ

ಪುಲ್ವಾಮಾ ದಾಳಿಗೆ ಮೋದಿ ಸರ್ಕಾರದ ಲೋಪವೇ ಕಾರಣ: ರಾಹುಲ್ ಸಂದರ್ಶನದಲ್ಲಿ ಮಲಿಕ್ ಹೇಳಿಕೆ

- Advertisement -
- Advertisement -

ಪುಲ್ವಾಮಾ ದಾಳಿ, ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿ, ಅದಾನಿ ಮತ್ತು ರಾಜಕೀಯದಲ್ಲಿ ತಮ್ಮ ಆರಂಭಿಕ ದಿನಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಮಾತನಾಡಿ ಭಾರಿ ಸದ್ದು ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಈ ವೇಳೆ ಮಾತನಾಡಿರುವ ವೀಡಿಯೊವನ್ನು ಬುಧವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ರಾಹುಲ್ ಹಂಚಿಕೊಂಡಿದ್ದಾರೆ.

2019ರ ಪುಲ್ವಾಮಾ ದಾಳಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಲೋಪವೇ ಕಾರಣ ಎಂದು ಸತ್ಯಪಾಲ್ ಮಲಿಕ್ ಆರೋಪಿಸಿದ್ದಾರೆ. ಈ ಸಂದರ್ಶನದಲ್ಲಿ ಅವರು ಅದನ್ನೇ ಪುನರುಚ್ಚರಿಸಿದ್ದಾರೆ. ”ನಾನು ಎರಡು ಚಾನೆಲ್‌ಗಳಿಗೆ ಇದು ನಮ್ಮ ತಪ್ಪು ಎಂದು ಹೇಳಿದೆ ಆದರೆ ಇದನ್ನು ಎಲ್ಲಿಯೂ ಹೇಳಬೇಡಿ ಎಂದು ಕೇಳಿದೆ.. ಏಕೆಂದರೆ ನನ್ನ ಹೇಳಿಕೆಗಳು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ನಾನು ಭಾವಿಸಿದೆ. ಆದರೆ ಯಾವುದೇ ತನಿಖೆ ನಡೆದಿಲ್ಲ. ಅದನ್ನು ಚುನಾವಣೆ ಉದ್ದೇಶಕ್ಕಾಗಿ ಬಳಸಲಾಯಿತು. ಮೂರನೇ ದಿನಗಳ ನಂತರ, ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ರಾಜಕೀಯವಾಗಿ ಬಳಸಿಕೊಂಡರು” ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

”ಪುಲ್ವಾಮಾ ಘಟನೆ ಏಕೆ ಸಂಭವಿಸಿತು? ಅವರು 5 ವಿಮಾನಗಳನ್ನು ಕೇಳಿದ್ದರು, ಅವರು ನನ್ನನ್ನು ಕೇಳಿದ್ದರೆ, ನಾನು ಅದನ್ನು ತಕ್ಷಣವೇ ನೀಡುತ್ತಿದ್ದೆ. ಹಿಮದಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ನಾನು ವಿಮಾನವನ್ನು ಒದಗಿಸಿದೆ. ದೆಹಲಿಯಲ್ಲಿ ವಿಮಾನವನ್ನು ಬಾಡಿಗೆಗೆ ಪಡೆಯುವುದು ಸುಲಭ. ಆದರೆ ಅವರ ಅರ್ಜಿ ಗೃಹ ಸಚಿವಾಲಯದಲ್ಲೇ ಇತ್ತು. ಆನಂತರ ಅದನ್ನು ತಿರಸ್ಕರಿಸಲಾಯಿತು. ನಂತರ CRPF ಸಿಬ್ಬಂದಿ ಅಸುರಕ್ಷಿತವಾದ ರಸ್ತೆಯ ಮೂಲಕ ಹೋದರು” ಎಂದು ಮಲಿಕ್ ಹೇಳಿದರು.

ಸಂದರ್ಶನವನ್ನು ಹಂಚಿಕೊಂಡ ರಾಹುಲ್ ಗಾಂಧಿ, ”ಈ ಸಂಭಾಷಣೆಯು ಇಡಿ-ಸಿಬಿಐ ನಡುವೆ ಕೋಲಾಹಲವನ್ನು ಸೃಷ್ಟಿಸುತ್ತದೆಯೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಪುಲ್ವಾಮಾ, ರೈತರ ಚಳವಳಿ ಮತ್ತು ಅಗ್ನಿವೀರ್‌ನಂತಹ ಪ್ರಮುಖ ವಿಷಯಗಳ ಕುರಿತು ಮಾಜಿ ರಾಜ್ಯಪಾಲ ಮತ್ತು ರೈತ ನಾಯಕ, ಸತ್ಯಪಾಲ್ ಮಲಿಕ್ ಜಿ ಅವರೊಂದಿಗೆ ಆಸಕ್ತಿದಾಯಕ ಚರ್ಚೆ! ನನ್ನ YouTube ಚಾನೆಲ್‌ನಲ್ಲಿ ಸಂಪೂರ್ಣ ವೀಡಿಯೊವನ್ನು ವೀಕ್ಷಿಸಿ” ಎಂದು ಎಕ್ಸ್‌ನಲ್ಲಿ ರಾಹುಲ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ್ದ PIL ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...