Homeಮುಖಪುಟಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್...

ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

- Advertisement -
- Advertisement -

ನಮ್ಮ ಸೈನಿಕರ ಶವಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಪುನರುಚ್ಚರಿಸುವ ಮೂಲಕ ಸರ್ಕಾರದ ಮೇಲೆ ಮತ್ತೊಮ್ಮೆ ವಾಗ್ಧಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಸೋಮವಾರ ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು 2019 ರ ಲೋಕಸಭೆಯ ಚುನಾವಣೆಯು ”ನಮ್ಮ ಸೈನಿಕರ ಮೃತದೇಹಗಳ ಮೇಲೆ ನಡೆಸಲಾಯಿತು” ಎಂದು ಹೇಳಿದ್ದಾರೆ.

”ಆ ಘಟನೆ ನಡೆದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದೆ. ಆದರೆ ಅವರು ನನಗೆ ಮೌನವಾಗಿರಲು ಹೇಳಿದರು. ಆಗಲೇ ತನಿಖೆ ನಡೆಸಿದ್ದರೆ ಅಂದಿನ ಗೃಹ ಸಚಿವರು ರಾಜೀನಾಮೆ ನೀಡಬೇಕೇತ್ತು” ಎಂದರು.

”2019ರ ಲೋಕಸಭೆ ಚುನಾವಣೆಗಳು ನಮ್ಮ ಸೈನಿಕರ ಶವಗಳ ಮೇಲೆ ನಡೆಸಿದರು. ಆ ಬಗ್ಗೆ ಯಾವುದೇ ತನಿಖೆಯನ್ನು ಮಾಡಲಿಲ್ಲ. ಒಂದು ವೇಳೆ ತನಿಖೆ ನಡೆಸಿದ್ದರೆ, ಆಗಿನ ಗೃಹ ಸಚಿವ (ರಾಜನಾಥ್ ಸಿಂಗ್) ರಾಜೀನಾಮೆ ನೀಡಬೇಕಾಗಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು” ಎಂದು ಅಲ್ವಾರ್ ಜಿಲ್ಲೆಯ ಬನ್ಸೂರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲಿಕ್ ಹೇಳಿದ್ದಾರೆ.

ಲಡಾಖ್ ಮತ್ತು ಜಮ್ಮು-ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ವಿಭಜಿಸುವ ಮೊದಲು, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದರು, ಅಲ್ಲಿ ಅವರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

2019ರ ಫೆಬ್ರವರಿ 14, ಭಾನುವಾರ ಪುಲ್ವಾಮಾ ದಾಳಿ ನಡೆಯಿತು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಿಕರಣಕ್ಕಾಗಿ ಚಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿದ್ದರು. ಅಲ್ಲಿಂದ ಅವರು ಬಂದ ಮೇಲೆ ನನಗೆ ಕರೆ ಮಾಡಿದರು. ನಮ್ಮ ಸೈನಿಕರು ಬಲಿಯಾಗಿದ್ದಾರೆ. ನಮ್ಮ ತಪ್ಪಿನಿಂದಾಗಿ ಅವರು ಬಲಿಯಾಗುವಂತಾಯಿತು ಎಂದು ಹೇಳಿದೆ. ಆದರೆ, ಅವರು ಈ ಬಗ್ಗೆ ಮಾತನಾಡಬೇಡಿ, ಸುಮ್ಮನಿರುವಂತೆ ಸೂಚಿಸಿದರು ಎಂದು ಸತ್ಯಪಾಲ್ ಮಲಿಕ್ ಅವರು ಹೇಳಿದರು.

ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ವಿಮಾ ಯೋಜನೆಯ ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡಲಾಯಿತು ಎಂಬ ಅವರ ಹೇಳಿಕೆಯ ಬಗ್ಗೆ ಸಿಬಿಐ ಇತ್ತೀಚೆಗೆ ಮಲಿಕ್ ಅವರನ್ನು ಪ್ರಶ್ನಿಸಿದೆ.

ಇದೇ ವೇಳೆ ಮೋದಿ ಮತ್ತು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮಲೀಕ್, ”ಅದಾನಿ ಕೇವಲ ಮೂರು ವರ್ಷಗಳಲ್ಲಿ ಸಾಕಷ್ಟು ಹಣವನ್ನು ಗಳಿಸಿದ್ದಾರೆ. ಅವರು ಅಷ್ಟು ಕಡಿಮೆ ಅವಧಿಯಲ್ಲಿ ಅಷ್ಟು ಶ್ರೀಮಂತರಾಗಲು ಸಾಧ್ಯವೇ?” ಎಂದು ಅಲ್ಲಿದ್ದ ಜನರನ್ನು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...