Homeಮುಖಪುಟ'ನಮ್ಮ ತಪ್ಪಿನಿಂದ ಪುಲ್ವಾಮ ದಾಳಿ ಸಂಭವಿಸಿತು': ಸತ್ಯಪಾಲ್ ಮಲಿಕ್ ಹೇಳಿಕೆಗೆ ಪ್ರಧಾನಿ ಮೋದಿ ಉತ್ತರಿಸುವಂತೆ ಪ್ರತಿಪಕ್ಷಗಳ...

‘ನಮ್ಮ ತಪ್ಪಿನಿಂದ ಪುಲ್ವಾಮ ದಾಳಿ ಸಂಭವಿಸಿತು’: ಸತ್ಯಪಾಲ್ ಮಲಿಕ್ ಹೇಳಿಕೆಗೆ ಪ್ರಧಾನಿ ಮೋದಿ ಉತ್ತರಿಸುವಂತೆ ಪ್ರತಿಪಕ್ಷಗಳ ಒತ್ತಾಯ

ಸಿಆರ್‌ಪಿಎಫ್‌ನ ವೀರ ಸೈನಿಕರು ವಿಮಾನವನ್ನು ಕೇಳಿದಾಗ ಅದನ್ನು ಏಕೆ ನೀಡಲಿಲ್ಲ? ನಮ್ಮ ಸೈನಿಕರು ಹುತಾತ್ಮತೆಗೆ ಯಾರು ಹೊಣೆ?

- Advertisement -
- Advertisement -

‘ನಮ್ಮ ತಪ್ಪಿನಿಂದ ಪುಲ್ವಾಮ ದಾಳಿ ಸಂಭವಿಸಿತು’ ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಮುಖಂಡರಾದ ಸತ್ಯಪಾಲ್ ಮಲಿಕ್ ಹೇಳಿಕೆಗೆ ಪ್ರಧಾನಿ ಮೋದಿ ಉತ್ತರಿಸುವಂತೆ ಪ್ರತಿಪಕ್ಷಗಳ ಒತ್ತಾಯಿಸಿವೆ. ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ ಮತ್ತು ಆಪ್ ಪಕ್ಷಗಳು ಈ ಕುರಿತು ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿವೆ.

“ನಾಲ್ಕು ವರ್ಷಗಳ ಅವಧಿಯ ನಂತರ, ಪುಲ್ವಾಮ ಭಯೋತ್ಪಾದಕ ದಾಳಿಯ ವಿಚಾರಣೆ ಎಲ್ಲಿಗೆ ತಲುಪಿದೆ? ಎನ್ಎಸ್ಎ ಮುಖ್ಯಸ್ಥರಾದ ಅಜಿತ್ ದೋವಲ್ ಮತ್ತು ಆಗಿನ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಉತ್ತರದಾಯಿತ್ವವನ್ನು ಎಲ್ಲಿ, ಯಾವಾಗ, ಹೇಗೆ ಮತ್ತು ಯಾರು ಸರಿಪಡಿಸುತ್ತಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯ ಶ್ರೀನಾಟೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಜೈರಾಂ ರಮೇಶ್ ಮತ್ತು ಪವನ್‌ ಖೇರಾರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಮ್ಮು ಕಾಶ್ಮೀರಕ್ಕೆ 300 ಕೆಜಿ ಆರ್‌ಡಿಎಕ್ಸ್ ಹೇಗೆ ಬಂದಿತು? ಅಲ್ಲಿ ಸಾಕಷ್ಟು ಗುಪ್ತಚರ ಮಾಹಿತಿ ಇತ್ತು, ಜೈಶ್‌ನಿಂದ ಬೆದರಿಕೆ ಇತ್ತು, ಆದರೂ ಸೈನಿಕರನ್ನು ರಸ್ತೆಯಿಂದ ಏಕೆ ಕರೆದೊಯ್ಯಲಾಯಿತು? ಯೋಧರಿಗೆ ವಿಮಾನಗಳನ್ನು ಏಕೆ ನೀಡಲಿಲ್ಲ ಎಂಬುದಕ್ಕೆ ಉತ್ತರ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಜೈರಾಂ ರಮೇಶ್ ಮಾತನಾಡಿ, “ಸತ್ಯಪಾಲ್ ಮಲಿಕ್ ಅವರು 4 ರಾಜ್ಯಗಳ ಗವರ್ನರ್ ಆಗಿರುವುದರಿಂದ, ಅವರ ಈ ಆರೋಪಗಳು ಗಂಭೀರವಾಗಿವೆ. ಅವರು ಹಿರಿಯ ನಾಯಕರಾಗಿದ್ದು, ಇಂದಿಗೂ ಬಿಜೆಪಿ ಸದಸ್ಯರಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ಪ್ರತಿಯೊಂದು ಪ್ರಮುಖ ವಿಷಯದಲ್ಲೂ ಮೌನ ತಂತ್ರವನ್ನು ಅನುಸರಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಈ ಸರ್ಕಾರವು ಕನಿಷ್ಟ ಆಡಳಿತ ಮತ್ತು ಗರಿಷ್ಠ ಮೌನದ ತತ್ವವನ್ನು ನಂಬುತ್ತದೆ” ಎಂದು ಅವರು ಟೀಕಿಸಿದ್ದಾರೆ.

“ಮೋದಿಜೀಯವರಿಗೆ ಭ್ರಷ್ಟಾಚಾರದಿಂದ ಹೆಚ್ಚೆನೂ ಸಮಸ್ಯೆಯಿಲ್ಲ ಎಂದು ಸತ್ಯಪಾಲ್ ಮಲಿಕ್ ಜೀ ಹೇಳಿದ್ದಾರೆ. ನಾನು ಇದನ್ನು ಹೇಳುತ್ತಿಲ್ಲ, ಆದರೆ ಅವರದೇ ಪಕ್ಷದ ಮುಖಂಡರು ಹೇಳಿದ್ದಾರೆ. ಅದೇ ಸಂದರ್ಶನದಲ್ಲಿ ಬಿಜೆಪಿಯ ಕೆಲವು ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ಹಣ ವಸೂಲಿ ಮಾಡುತ್ತಾರೆ ಎಂದಿದ್ದಾರೆ. ಅವರು ಎಲ್ಲಾ ಹಣವನ್ನು ತಮ್ಮಲ್ಲಿ ಇಟ್ಟುಕೊಳ್ಳುವುದಿಲ್ಲ. ಆದರೆ ಮೇಲಿನವರಿಗೆ ಹಣವನ್ನು ಕಳುಹಿಸುತ್ತಾರೆ ಮತ್ತು ಅಲ್ಲಿಂದ ತಮ್ಮ ಸ್ನೇಹಿತರ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತಾರೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

“ಈಗ ರಾಷ್ಟ್ರಪತಿಗಳ ಅಧಿಕೃತ ಅಪಾಯಿಂಟ್‌ಮೆಂಟ್‌ಗಳನ್ನು ಸಹ ಪ್ರಧಾನಿ ನರೇಂದ್ರ ಮೋದಿ ಅವರ ಇಚ್ಛೆ ಮತ್ತು ಹುಚ್ಚಾಟಿಕೆಯ ಪ್ರಕಾರ ನಿಗದಿಪಡಿಸಲಾಗಿದೆ ಎಂದು ನಮಗೆ ತಿಳಿದಿದೆ! ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ! ” ಎಂದು ಟಿಎಂಸಿ ಪಕ್ಷ ಟ್ವೀಟ್ ಮಾಡಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಟ್ವೀಟ್ ಮಾಡಿ, “ಆರೋಪಗಳು ಗಂಭೀರವಾಗಿದೆ ಮತ್ತು ಅವು ನಿಜವಾಗಿದ್ದರೆ, ಮೋದಿಯವರ ಅಡಿಯಲ್ಲಿ ರಾಷ್ಟ್ರೀಯ ಭದ್ರತೆ, ಭ್ರಷ್ಟಾಚಾರ ಮತ್ತು ಒಕ್ಕೂಟದ ತತ್ವದ ಸ್ಥಿತಿ ಅಪಾಯದಲ್ಲಿದೆ.. ಕುದುರೆಯ ಬಾಯಿಯಿಂದ ಬರುವ ಈ ಅತ್ಯಂತ ನಿರ್ಣಾಯಕ ಆರೋಪಗಳನ್ನು ಸ್ವತಂತ್ರವಾಗಿ ಮತ್ತು ನ್ಯಾಯಯುತವಾಗಿ ತನಿಖೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಸಮಾಜವಾದಿ ಪಕ್ಷದ ವಕ್ತಾರ ಮನೋಜ್ ಸಿಂಗ್ ಕಾಕಾ ಪುಲ್ವಾಮಾ ಘಟನೆಯನ್ನು ತಡೆಯುವಲ್ಲಿ ಮೋದಿ ಸರ್ಕಾರದ ಅಸಮರ್ಥತೆಯನ್ನು ಉಲ್ಲೇಖಿಸಿದ್ದಾರೆ. “ಸಿಆರ್‌ಪಿಎಫ್‌ನ ವೀರ ಸೈನಿಕರು ವಿಮಾನವನ್ನು ಕೇಳಿದಾಗ ಅದನ್ನು ಏಕೆ ನೀಡಲಿಲ್ಲ? ನಮ್ಮ ಸೈನಿಕರು ಹುತಾತ್ಮತೆಗೆ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅದಾನಿ ಹಗರಣವು ಸಾಮಾನ್ಯ ಜನರನ್ನು ತಲುಪಿದರೆ ಬಿಜೆಪಿ ಕೆಟ್ಟದಾಗಿ ಸೋಲಲಿದೆ: ಸತ್ಯಪಾಲ್ ಮಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...