Homeಮುಖಪುಟಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

ಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ದಿ ವೈರ್ ನಡೆಸಿದ ಸಂದರ್ಶನವೊಂದರಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಇದೀಗ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ.

ಪುಲ್ವಾಮ ದಾಳಿಯ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ್ದಕ್ಕೆ ಸಿಬಿಐ ನೋಟಿಸ್ ನೀಡಿದೆ ಎಂದು ಲಿಂಕ್ ಮಾಡಿರುವ ಕಾಂಗ್ರೆಸ್,  ”ಈಗ ಎಲ್ಲಾ ಮುಗಿದಿದೆ, ಈ ಹಂತದಲ್ಲಿ ಪಿಎಂ ಮೋದಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಸತ್ಯಪಾಲ್ ಮಲಿಕ್ ಅವರು ಮೋದಿ ಅವರನ್ನು ದೇಶದ ಮುಂದೆ ಬೆತ್ತಲುಗೊಳಿಸಿದ್ದಾರೆ. ಈಗ ಸಿಬಿಐ ಮಲಿಕ್ ಅವರನ್ನು ವಿಚಾರಣೆಗೆ ಕರೆದಿದೆ. ಇದು ಆಗಬೇಕಿತ್ತು.. ಇನ್ನೂ ಒಂದು ವಿಷಯ  ಏನೆಂದರೆ, ಈ ಸಮಯದಲ್ಲಿ ‘ಗೋದಿ ಮೀಡಿಯಾ’ಗಳು ಇನ್ನೂ ಸುಮ್ಮನಿರುತ್ತವೆ,. ಇದನ್ನು ನೀವು ಬರೆದಿಟ್ಟುಕೊಳ್ಳಿ” ಎಂದು ಟ್ವಿಟ್ ಮಾಡಿದೆ.

ಪುಲ್ವಾಮಾ ದಾಳಿ ಬಗ್ಗೆ ಸತ್ಯಾಪಲ್ ಹೇಳಿದ್ದೇನು?

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ

ವಿಮಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಜಮ್ಮು ಕಾಶ್ಮೀರರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಬಿಐ ಕೆಲವು ಸ್ಪಷ್ಟೀಕರಣಗಳನ್ನು ಬಯಸುತ್ತಿದೆ ಎಂದು ಮಲಿಕ್ ತಿಳಿಸಿದ್ದಾರೆ. ”ಕೆಲವು ಸ್ಪಷ್ಟೀಕರಣಗಳಿಗಾಗಿ” ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್‌ಹೌಸ್‌ನಲ್ಲಿ ಅವರ ಉಪಸ್ಥಿತಿಯನ್ನು ಸಿಬಿಐ ಕೇಳಿದೆ ಎಂದು ಸತ್ಯಪಾಲ್ ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡಿದ ಸಂದರ್ಶನದ ಮೂಲಕ ಮಾಜಿ ರಾಜ್ಯಪಾಲರು ಸುದ್ದಿಯಲ್ಲಿದ್ದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಮಲಿಕ್ ಅವರನ್ನು ಕರೆಯುವುದು ಇದೇ ಮೊದಲಲ್ಲ.

ಕಳೆದ ವರ್ಷ ಏಪ್ರಿಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ 2,200 ಕೋಟಿ ರೂ. ಮೌಲ್ಯದ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಸಿವಿಲ್ ಕೆಲಸಗಳಿಗೆ ಗುಂಪು ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಮಲಿಕ್ ಅವರು ಮಾಡಿದ ಭ್ರಷ್ಟಾಚಾರ ಆರೋಪಗಳ ಮೇಲೆ ಸಿಬಿಐ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಸತ್ಯಪಾಲ್ ಮಲಿಕ್ ಅವರು ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚದ ಆಫರ್ ನೀಡಿದ್ದರು ಎಂದು ಆರೋಪಿಸಿದ್ದರು. ಸರ್ಕಾರಿ ನೌಕರರಿಗೆ ಸಮೂಹ ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವ ಕಡತಗಳಿವು. ಸಿಬಿಐ ಅನಿಲ್ ಅಂಬಾನಿಯವರ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿ ಮತ್ತು ಟ್ರಿನಿಟಿ ರೀ-ಇನ್ಶೂರೆನ್ಸ್ ಬ್ರೋಕರ್ಸ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...