Homeಮುಖಪುಟಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

ಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ದಿ ವೈರ್ ನಡೆಸಿದ ಸಂದರ್ಶನವೊಂದರಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಇದೀಗ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ.

ಪುಲ್ವಾಮ ದಾಳಿಯ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ್ದಕ್ಕೆ ಸಿಬಿಐ ನೋಟಿಸ್ ನೀಡಿದೆ ಎಂದು ಲಿಂಕ್ ಮಾಡಿರುವ ಕಾಂಗ್ರೆಸ್,  ”ಈಗ ಎಲ್ಲಾ ಮುಗಿದಿದೆ, ಈ ಹಂತದಲ್ಲಿ ಪಿಎಂ ಮೋದಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಸತ್ಯಪಾಲ್ ಮಲಿಕ್ ಅವರು ಮೋದಿ ಅವರನ್ನು ದೇಶದ ಮುಂದೆ ಬೆತ್ತಲುಗೊಳಿಸಿದ್ದಾರೆ. ಈಗ ಸಿಬಿಐ ಮಲಿಕ್ ಅವರನ್ನು ವಿಚಾರಣೆಗೆ ಕರೆದಿದೆ. ಇದು ಆಗಬೇಕಿತ್ತು.. ಇನ್ನೂ ಒಂದು ವಿಷಯ  ಏನೆಂದರೆ, ಈ ಸಮಯದಲ್ಲಿ ‘ಗೋದಿ ಮೀಡಿಯಾ’ಗಳು ಇನ್ನೂ ಸುಮ್ಮನಿರುತ್ತವೆ,. ಇದನ್ನು ನೀವು ಬರೆದಿಟ್ಟುಕೊಳ್ಳಿ” ಎಂದು ಟ್ವಿಟ್ ಮಾಡಿದೆ.

ಪುಲ್ವಾಮಾ ದಾಳಿ ಬಗ್ಗೆ ಸತ್ಯಾಪಲ್ ಹೇಳಿದ್ದೇನು?

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ

ವಿಮಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಜಮ್ಮು ಕಾಶ್ಮೀರರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಬಿಐ ಕೆಲವು ಸ್ಪಷ್ಟೀಕರಣಗಳನ್ನು ಬಯಸುತ್ತಿದೆ ಎಂದು ಮಲಿಕ್ ತಿಳಿಸಿದ್ದಾರೆ. ”ಕೆಲವು ಸ್ಪಷ್ಟೀಕರಣಗಳಿಗಾಗಿ” ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್‌ಹೌಸ್‌ನಲ್ಲಿ ಅವರ ಉಪಸ್ಥಿತಿಯನ್ನು ಸಿಬಿಐ ಕೇಳಿದೆ ಎಂದು ಸತ್ಯಪಾಲ್ ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡಿದ ಸಂದರ್ಶನದ ಮೂಲಕ ಮಾಜಿ ರಾಜ್ಯಪಾಲರು ಸುದ್ದಿಯಲ್ಲಿದ್ದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಮಲಿಕ್ ಅವರನ್ನು ಕರೆಯುವುದು ಇದೇ ಮೊದಲಲ್ಲ.

ಕಳೆದ ವರ್ಷ ಏಪ್ರಿಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ 2,200 ಕೋಟಿ ರೂ. ಮೌಲ್ಯದ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಸಿವಿಲ್ ಕೆಲಸಗಳಿಗೆ ಗುಂಪು ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಮಲಿಕ್ ಅವರು ಮಾಡಿದ ಭ್ರಷ್ಟಾಚಾರ ಆರೋಪಗಳ ಮೇಲೆ ಸಿಬಿಐ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಸತ್ಯಪಾಲ್ ಮಲಿಕ್ ಅವರು ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚದ ಆಫರ್ ನೀಡಿದ್ದರು ಎಂದು ಆರೋಪಿಸಿದ್ದರು. ಸರ್ಕಾರಿ ನೌಕರರಿಗೆ ಸಮೂಹ ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವ ಕಡತಗಳಿವು. ಸಿಬಿಐ ಅನಿಲ್ ಅಂಬಾನಿಯವರ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿ ಮತ್ತು ಟ್ರಿನಿಟಿ ರೀ-ಇನ್ಶೂರೆನ್ಸ್ ಬ್ರೋಕರ್ಸ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...