Homeಮುಖಪುಟಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

- Advertisement -
- Advertisement -

ಪುಲ್ವಾಮ ದಾಳಿ ವಿಚಾರವಾಗಿ ದಿ ವೈರ್ ನಡೆಸಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರು ಪ್ರಧಾನಿ ಮೋದಿ ಮೇಲೆ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಅಮಿತ್ ಶಾ ಹಾಗೂ ಸತ್ಯಪಾಲ್ ನಡುವೆ ವಾಕ್ ಸಮರ ಶುರುವಾಗಿದೆ.

”ಬಿಜೆಪಿಯು ದೇಶದ ಜನತೆ ಮುಂದೆ ಮುಚ್ಚಿಡುವ ಯಾವ ಕೆಲಸವನ್ನೂ ಮಾಡಿಲ್ಲ ಎಂದು ನಾನು ಸಂಪೂರ್ಣ ದೃಢವಾಗಿ ಹೇಳಬಲ್ಲೆ. ನಮ್ಮ ಜತೆಗಿನ ಸಂಬಂಧ ಕಡಿದುಕೊಂಡ ಬಳಿಕ ಅವರು ಆರೋಪ ಮಾಡುತ್ತಿದ್ದಾರೆ, ಅದನ್ನು ಮಾಧ್ಯಮಗಳು ಮತ್ತು ಜನರು ಅದಕ್ಕೆ ಅನುಗುಣವಾಗಿ ಮೌಲ್ಯಮಾಪನ ಮಾಡಬೇಕು” ಎಂದು ಕಳೆದ ವಾರ ಖಾಸಗಿ ಟಿವಿ ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ರಾಜಸ್ತಾನದ ಸಿಕಾರ್‌ನಲ್ಲಿ ಶಾ ಹೇಳಿಕೆಗೆ ಸಂಬಂಧಿಸಿದಂತೆ  ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಮ್ಮು ಹಾಗೂ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ರಾಜ್ಯಪಾಲ ಅವರು, ”ಹುದ್ದೆ ತೊರೆದ ಬಳಿಕ ನಾನು ಪುಲ್ವಾಮಾ ದಾಳಿ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳುವುದು ತಪ್ಪು. ಆ ದಾಳಿಯ ದಿನದಂದೇ ನಾನು ಮಾತನಾಡಿದ್ದೇನೆ” ಎಂದು ತಿರುಗೇಟು ನೀಡಿದ್ದಾರೆ.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಮಲಿಕ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ”ಗಂಭೀರ ಅಭ್ಯರ್ಥಿ”, ಅದು ಅವರ ಹಣೆಬರಹದಲ್ಲಿದ್ದರೆ ಆಗುತ್ತಾರೆ” ಎಂದು ಹೇಳಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯವೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ”ನಾನು ಅವರಿಗೆ ಶುಭ ಹಾರೈಸುತ್ತೇನೆ, ಆದರೆ ರಾಜಕೀಯ ಮತ್ತು ಚುನಾವಣೆಯಲ್ಲಿ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ, ಪ್ರಸ್ತುತ ಪರಿಸ್ಥಿತಿ ಅವರಿಗೆ ಕಷ್ಟಕರವಾಗಿದೆ, ಅವರು ಬೇರೆ ಏನಾದರೂ ಪ್ಯತ್ನಗಳನ್ನು ಮಾಡಬಹುದು” ಎಂದು ಉತ್ತರಿಸಿದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

ಗೌತಮ್ ಅದಾನಿ ಹಗರಣದ ವಿಚಾರದಲ್ಲಿ ಪ್ರಧಾನಿ ಮೋದಿಯವರ ಮೌನ ತನಗೆ ಹಾನಿ ಮಾಡುತ್ತದೆ. ಇದರ ಜೊತೆಗೆ ಪುಲ್ವಾಮಾ ವಿಷಯದ ಬಗ್ಗೆಯೂ ಪ್ರಧಾನಿ ಮಾತನಾಡಬೇಕು ಎಂದು  ಮಲಿಕ್ ಒತ್ತಾಯಿಸಿದರು.

ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಬಿಜೆಪಿಯು ವಸುಂಧರಾ ರಾಜೇ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿದರೆ, ಬಿಜೆಪಿಯ ಗೆಲುವಿನ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ಮಲಿಕ್ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಸತ್ಯಪಾಲ ಹೇಳಿದ್ದೇನು?

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...