Homeಮುಖಪುಟಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

- Advertisement -
- Advertisement -

ಪುಲ್ವಾಮ ದಾಳಿ ವಿಚಾರವಾಗಿ ದಿ ವೈರ್ ನಡೆಸಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರು ಪ್ರಧಾನಿ ಮೋದಿ ಮೇಲೆ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಅಮಿತ್ ಶಾ ಹಾಗೂ ಸತ್ಯಪಾಲ್ ನಡುವೆ ವಾಕ್ ಸಮರ ಶುರುವಾಗಿದೆ.

”ಬಿಜೆಪಿಯು ದೇಶದ ಜನತೆ ಮುಂದೆ ಮುಚ್ಚಿಡುವ ಯಾವ ಕೆಲಸವನ್ನೂ ಮಾಡಿಲ್ಲ ಎಂದು ನಾನು ಸಂಪೂರ್ಣ ದೃಢವಾಗಿ ಹೇಳಬಲ್ಲೆ. ನಮ್ಮ ಜತೆಗಿನ ಸಂಬಂಧ ಕಡಿದುಕೊಂಡ ಬಳಿಕ ಅವರು ಆರೋಪ ಮಾಡುತ್ತಿದ್ದಾರೆ, ಅದನ್ನು ಮಾಧ್ಯಮಗಳು ಮತ್ತು ಜನರು ಅದಕ್ಕೆ ಅನುಗುಣವಾಗಿ ಮೌಲ್ಯಮಾಪನ ಮಾಡಬೇಕು” ಎಂದು ಕಳೆದ ವಾರ ಖಾಸಗಿ ಟಿವಿ ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ರಾಜಸ್ತಾನದ ಸಿಕಾರ್‌ನಲ್ಲಿ ಶಾ ಹೇಳಿಕೆಗೆ ಸಂಬಂಧಿಸಿದಂತೆ  ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಮ್ಮು ಹಾಗೂ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ರಾಜ್ಯಪಾಲ ಅವರು, ”ಹುದ್ದೆ ತೊರೆದ ಬಳಿಕ ನಾನು ಪುಲ್ವಾಮಾ ದಾಳಿ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳುವುದು ತಪ್ಪು. ಆ ದಾಳಿಯ ದಿನದಂದೇ ನಾನು ಮಾತನಾಡಿದ್ದೇನೆ” ಎಂದು ತಿರುಗೇಟು ನೀಡಿದ್ದಾರೆ.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಮಲಿಕ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ”ಗಂಭೀರ ಅಭ್ಯರ್ಥಿ”, ಅದು ಅವರ ಹಣೆಬರಹದಲ್ಲಿದ್ದರೆ ಆಗುತ್ತಾರೆ” ಎಂದು ಹೇಳಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯವೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ”ನಾನು ಅವರಿಗೆ ಶುಭ ಹಾರೈಸುತ್ತೇನೆ, ಆದರೆ ರಾಜಕೀಯ ಮತ್ತು ಚುನಾವಣೆಯಲ್ಲಿ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ, ಪ್ರಸ್ತುತ ಪರಿಸ್ಥಿತಿ ಅವರಿಗೆ ಕಷ್ಟಕರವಾಗಿದೆ, ಅವರು ಬೇರೆ ಏನಾದರೂ ಪ್ಯತ್ನಗಳನ್ನು ಮಾಡಬಹುದು” ಎಂದು ಉತ್ತರಿಸಿದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

ಗೌತಮ್ ಅದಾನಿ ಹಗರಣದ ವಿಚಾರದಲ್ಲಿ ಪ್ರಧಾನಿ ಮೋದಿಯವರ ಮೌನ ತನಗೆ ಹಾನಿ ಮಾಡುತ್ತದೆ. ಇದರ ಜೊತೆಗೆ ಪುಲ್ವಾಮಾ ವಿಷಯದ ಬಗ್ಗೆಯೂ ಪ್ರಧಾನಿ ಮಾತನಾಡಬೇಕು ಎಂದು  ಮಲಿಕ್ ಒತ್ತಾಯಿಸಿದರು.

ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಬಿಜೆಪಿಯು ವಸುಂಧರಾ ರಾಜೇ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿದರೆ, ಬಿಜೆಪಿಯ ಗೆಲುವಿನ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ಮಲಿಕ್ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಸತ್ಯಪಾಲ ಹೇಳಿದ್ದೇನು?

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...