Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...