Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...