Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...