Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...