Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...