Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...