Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

"ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ" ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು...