Homeಮುಖಪುಟಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು ಮತ್ತು ಪಂಡಿತರು

- Advertisement -
- Advertisement -

ಕೃಪೆ: ದಿ ಕ್ವಿಂಟ್

ಅನುವಾದ: ಸೋಮಶೇಖರ್ ಚಲ್ಯ

40ಕ್ಕೂ ಹೆಚ್ಚು ಸಿ.ಆರ್‍.ಪಿ.ಎಫ್ ಯೋಧರನ್ನು ಬಲಿಪಡೆದ ಪುಲ್ವಾಮ ಘಟನೆ ನಡೆದ ಜಾಗದಿಂದ 15 ಕಿ.ಮೀ ದೂರದಲ್ಲಿರುವ ಅಚನ್ ಎಂಬ ಹಳ್ಳಿಯಲ್ಲಿ 80 ವರ್ಷದ ದೇವಾಲಯವನ್ನು ಹಿಂದೂ ಮುಸ್ಲೀಂ ಇಬ್ಬರು ಜೊತೆಯಾಗಿ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಬಹಳ ಹಿಂದೆಯೇ ಹಿಂದೂ ಮುಸ್ಲೀಂ ಸೋದರರು ಹಮ್ಮಿಕೊಂಡಿದ್ದ ಈ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಪುಲ್ವಾಮ ಘಟನೆಯ ನಂತರ ಉಂಟಾದ ಕಾಶ್ಮೀರಿಗಳ ಮೇಲಿನ ದಾಳಿ ಮತ್ತು ವ್ಯಾಪಕ ಒತ್ತಡದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಜಮಾ ಮಸೀದಿಯ ಪಕ್ಕದಲ್ಲೇ ಇರುವ ಈ ದೇವಸ್ಥಾನದಲ್ಲಿ ಮೊನ್ನೆಯಷ್ಟೇ ನಡೆದ ಮಹಾಶಿವರಾತ್ರಿಯ ದಿನದಂದು ಮುಸ್ಲೀಮರು ಎಲ್ಲಾ ಭಕ್ತರಿಗೂ ಕಾಶ್ಮೀರಿ ಸಂಪ್ರದಾಯಿಕ ಕಹ್ವಾ ಚಹಾವನ್ನು ನೀಡಿವ ಮೂಲಕ ದೇವಾಲಯದ ಅಭಿವೃದ್ಧಿಗೆ ಮತ್ತೆ ಚಾಲನೆ ನೀಡಿದ್ದಾರೆ. ಸ್ಥಳೀಯ ಮುಸ್ಲೀಮರು ಅಝಾನ್‍ನ ಜೊತೆಗೆ ದೇವಾಲಯದ ಗಂಟೆಯ ನಾದವನ್ನೂ ಕೇಳ ಬಯಸುತ್ತಾರೆ ಎನ್ನುವುದು ಇಲ್ಲಿನ ವಿಶೇಷ.

30 ವರ್ಷಗಳ ಹಿಂದೆ ಇಲ್ಲಿ ಒಂದು ಕಡೆ ದೇವಸ್ಥಾನದ ಗಂಟೆಯ ಶಬ್ದ ಬರುತ್ತಿದ್ದರೆ ಮತ್ತೊಂದು ಕಡೆ ಮಸೀದಿಯಿಂದ ಅಝಾನ್ ಕೇಳಿ ಬರುತ್ತಿತ್ತು. ಈಗ ಮತ್ತೆ 30 ವರ್ಷಗಳ ನಂತರ ಮಸೀದಿಯ ಅಝಾನ್‍ನೊಂದಿಗೆ ದೇವಸ್ಥಾನದ ಸ್ವರವೂ ಜೊತೆಗೂಡುವ ಆ ಕ್ಷಣಕ್ಕಾಗಿ ನಮ್ಮ ಹೃದಯ ಬಯಸುತ್ತಿದೆ ಎಂದು ಸ್ಥಳೀಯ ನಿವಾಸಿ ಮೊಹಮ್ಮದ್ ಯೂನಸ್ ಹೇಳುತ್ತಾರೆ.

ಶಿಥಿಲಗೋಂಡಿರುವ ದೇವಸ್ಥಾನವಿರುವ ಈ ಹಳ್ಳಿಯಲ್ಲಿ ಕೇವಲ ಒಂದೇ ಒಂದು ಪಂಡಿತ್ ಕುಟುಂಬವಿದ್ದು, ಅವರಿಗಾಗಿ ಮಸೀದಿಯ ಔಖಾಫ್ ಸಮಿತಿಯು ಅವರೊಂದಿಗೆ ದೇವಸ್ಥಾನವನ್ನು ಮರುಸ್ಥಾಪಿಸಲು ಮುಂದಾಗಿದ್ದಾರೆ.  ಅಂತೆಯೇ ಮುಸ್ಲೀಮರು ಅಕ್ಕಪಕ್ಕದ ಹಳ್ಳಿಯ ಸಂಬಂಧಿಕರಿಗಿಂತ ಹೆಚ್ಚಾಗಿ ಮುಖ್ಯವೆನಿಸುತ್ತಾರೆ, ಇವರ ಅಪೂರ್ವ ಪ್ರೀತಿ ನಮ್ಮ ಸಂಬಂಧಿಕರಿಗಿಂತ ಮಿಗಿಲಾದುದು, ನಾವೆಲ್ಲರೂ ಒಂದೇ ಕುಟುಂಬದವರಂತೆ ಬದುಕುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿ ಸಂಜಯ್‍ಕುಮಾರ್ ಮುಸ್ಲೀಮರ ಜೊತೆಗಿನ ಅನುಬಂಧವನ್ನು ಹೇಳಿಕೊಂಡಿದ್ದಾರೆ.

ಇಂತಹ ಬಾಂದವ್ಯ ತುಂಬಿದ ಸೌಹಾರ್ದ ಬದುಕಿಗಾಗಿ ತಮ್ಮ ಜೊತೆಗಿರುವ ಅಣ್ಣ-ತಮ್ಮಂದಿರಂತಿರುವ ಕಾಶ್ಮೀರಿ ಪಂಡಿತರ ಆಚರಣೆಗಾಗಿ ದೇವಾಲಯವನ್ನು ತಮ್ಮಿಂದಾಗುವಷ್ಟು ಶ್ರಮ ಹಾಕಿ ಪುನರಾರಂಭಿಸುತ್ತೇವೆ, ಅದನ್ನು ಅರ್ಧಕ್ಕೆ ಬಿಟ್ಟು ತಮ್ಮೊಡನಿರುವ ಪಂಡಿತರಿಗೆ ನಿರಾಶೆ ಮೂಡಿಸುವುದಿಲ್ಲವೆಂದು ಮಹಮ್ಮೊದ್ ಮಕ್ಬುಲ್ ಹೇಳುತ್ತಾರೆ.

ಕಾಶ್ಮೀರ ಸ್ವಾತಂತ್ರ್ಯ ಪೂರ್ವದಿಂದಲೂ ಹಿಂದೂ ಮುಸ್ಲೀಮರು ಸಹೋದರೆಯ ವಿಶ್ವಾಸ ಹೊಂದಿರುವ ಪ್ರದೇಶವಿದು. ಕಾಶ್ಮೀರಿ ಪಂಡಿತರು ಕಡಿಮೆ ಸಂಖ್ಯೆಯಲ್ಲಿರುವ ಈ ಭಾಗದಲ್ಲಿ ಅಮರನಾಥ ಯಾತ್ರೆ ಯಶಸ್ವಿಯಾಗುವುದು ಮುಸ್ಲೀಮರ ಕಾರ್ಯಶ್ರಮದಿಂದ, ಯಾತ್ರೆಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಗಳಾದಂತೆ ವ್ಯವಸ್ಥೆ ಮಾಡುವುದು ಮುಸ್ಲೀಮರೆ. ಇಂದಿಗೂ ಅದು ಮುಂದುವೆರೆದುಕೊಂಡು ಬಂದಿದೆ. ಧರ್ಮದ ಹಂಗಿಲ್ಲದೆ ಸಹಬಾಳ್ವೆ ಜೀವನವನ್ನು ಬಯಸಿ ಬದುಕುತ್ತಿರುವ ಈ ಪ್ರದೇಶ, ನಮ್ಮ ಮಧ್ಯೆ ಸುಳಿದಾಡುತ್ತಿರುವ ಕೋಮುವಾದಿ ಭಯೋತ್ಪಾದಕರ ಕೆಂಗಣ್ಣಿಗೆ ಗುರಿಯಾಗದಿರಲಿ, ಪ್ರೀತಿ ತುಂಬಿದ ಸೌಹಾರ್ದತೆ ದೇಶದ ತುಂಬಾ ಹಬ್ಬಲಿ, ಕಾಶ್ಮೀರಿ ಹಿಂದೂ ಮುಸ್ಲೀಮರ ಸಹಬಾಳ್ವೆ ಎಲ್ಲರಿಗೂ ಮಾದರಿಯಾಗಲಿ.

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...