Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...