Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...