Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...