Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...