Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...