Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....