Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...