Homeಮುಖಪುಟಪುಂಡಲೀಕ ಕಲ್ಲಿಗನೂರುರವರ 'ಚಾಲುಕ್ಯರ ಶಿಲ್ಪಕಲೆ' ಪುಸ್ತಕ ಬಿಡುಗಡೆ ನಾಳೆ

ಪುಂಡಲೀಕ ಕಲ್ಲಿಗನೂರುರವರ ‘ಚಾಲುಕ್ಯರ ಶಿಲ್ಪಕಲೆ’ ಪುಸ್ತಕ ಬಿಡುಗಡೆ ನಾಳೆ

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ.

- Advertisement -
- Advertisement -

ತಮ್ಮ ರೇಖಾ ಚಿತ್ರಗಳ ಮೂಲಕ ಪರಿಚಿತರಾಗಿರುವ ಪುಂಡಲೀಕ ಕಲ್ಲಿಗನೂರು ಅವರು ಕರ್ನಾಟಕ ಶಿಲ್ಪಕಲಾ ವೈಭವವನ್ನು ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಬೇಲೂರು- ಹಳೇಬೀಡು, ಗದಗ ಜಿಲ್ಲೆಯ ದೇಗುಲಗಳ ಶಿಲ್ಪಕಲೆಯನ್ನು ಟೇಬಲ್‌ ಟಾಪ್‌ ಪುಸ್ತಕಗಳ ರೂಪದಲ್ಲಿ ಹೊರ ತಂದಿರುವ ಅವರು ಈಗ ಬಾದಾಮಿ ಚಾಲುಕ್ಯರ ಶಿಲ್ಪಕಲಾ ಶ್ರೀಮಂತಿಕೆಯನ್ನು ಕುರಿತು ‘ಚಾಲುಕ್ಯರ ಶಿಲ್ಪಕಲೆ’ ಎಂಬ ನೂತನ ಪುಸ್ತಕ ಬರೆದಿದ್ದಾರೆ. ಡಿಸೆಂಬರ್ 11 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಈ ಪುಸ್ತಕ ಬಿಡುಗಡೆಯಾಗಲಿದೆ.

ಕರ್ನಾಟಕದ ಪ್ರಮುಖ ರಾಜವಂಶಗಳಲ್ಲಿ ಒಂದಾದ ಚಾಲುಕ್ಯ, ಬಾದಾಮಿ, ಐಹೊಳೆ, ಪಟ್ಟದ ಕಲ್ಲು ಹಾಗೂ ಮಹಾಕೂಟವನ್ನು ಆಳಿತ್ತು. ಈ ಅವಧಿಯಲ್ಲಿ ನಿರ್ಮಾಣವಾದ ದೇಗುಲಗಳು ಇಂದಿಗೂ ಸೃಷ್ಟಿ ವಿಸ್ಮಯದ ಸಂಕೇತಗಳು. ಪ್ರಪಂಚದ ಪಾರಂಪರಿಕ ತಾಣಗಳೆಂದು ಗುರುತಿಸಿಕೊಂಡಿರುವ ಈ ಚಾಲುಕ್ಯು ಶಿಲೆಯ ವೈಭವವನ್ನು ಚಿತ್ರ ಹಾಗೂ ಪಠ್ಯಗಳ ಮೂಲಕ ವಿಶಿಷ್ಟವಾಗಿ ಕಟ್ಟಿಕೊಡುವ ಪ್ರಯತ್ನವನ್ನು ‘ ಚಾಲುಕ್ಯರ ಶಿಲ್ಪಕಲೆ’ ಕೃತಿಯಲ್ಲಿ ಮಾಡಲಾಗಿದೆ.

ಸುಮಾರು 500 ಪುಟಗಳ ಬೃಹತ್‌ ಗಾತ್ರದ, ಬಹುವರ್ಣದ ಈ ಕೃತಿಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.

ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿಯವರು ಈ ಕೃತಿಗೆ ಮುನ್ನಡಿ ಬರೆಯುತ್ತಾ, ” ಬಾದಾಮಿ ಚಾಲುಕ್ಯರ ಶಿಲ್ಪಗಳು ಮಂಗಳೇಶನಿಂದ ಹಿಡಿದು ಇಮ್ಮಡಿ ಕೀರ್ತಿವರ್ಮನವರೆಗೆ ರಚಿತವಾಗಿವೆ. ಪುಂಡಲೀಕ ಕಲ್ಲಿಗರನೂರು ಅವರೂ ಸಹ ಶಿಲ್ಪಗಳ ವಿಮರ್ಶೆಗಿಂತ ಅವುಗಳ ಅಂದ, ಕಥಾಶಿಲ್ಪ, ಸಂಯೋಜನೆ ಇಂತಹ ವಿವರಗಳ ಕಡೆಗೆ ಗಮನ ಹರಿಸಿದ್ದಾರೆ. ಹೀಗಾಗಿ ಇವರ ಚಾಲುಕ್ಯ ಶಿಲ್ಪಕಲಾ ನೋಟ ಮಾಟ ಸಂಪುಟವು ಚಾಲುಕ್ಯು ಶಿಲ್ಪಕಲೆಯ ಸೌಂದರ್ಯ ಹಾಗೂ ಗಾಂಭೀರ್ಯಗಳನ್ನು ಪರಿಚಯಿಸುತ್ತದೆ” ಎಂದಿದ್ದಾರೆ.

ದೃಶ್ಯ ಕಲಾ ಇತಿಹಾಸಕಾರ, ಕೆ ವಿ ಸುಬ್ರಮಣ್ಯ ಅವರು ತಮ್ಮ ಮುನ್ನುಡಿಯಲ್ಲಿ, ” ಈ ಅಪೂರ್ವ ದೇವಾಲಯ ವಾಸ್ತುಶಿಲ್ಪ ನೆಲೆಗಳಲ್ಲಿ ನಡೆದಾಡಿ, ದೇವಾಲಯ ದೃಶ್ಯಕಲಾ ಇತಿಹಾಸದ ಅಧ್ಯಯನ ಮಾಡಿರುವ ಪುಂಡಲೀಕ ಕಲ್ಲಿಗನೂರ ಅವರ ಸಾಹಸಮಯ ಪ್ರಯತ್ನಗಳು ಹಲವು. ಈ ಹಿನ್ನೆಲೆಯಲ್ಲಿ ನೋಡುಗ/ಓದುಗರು ಇನ್ನೂ ಹಲವು ರೀತಿಗಳಲ್ಲಿ ಚಾಲುಕ್ಯರ ಶಿಲ್ಪಕಲೆಯನ್ನು ನೋಡಬಹುದಾದ ದಾರಿಗಳನ್ನು ಅನ್ವೇಷಿಸಿಕೊಳ್ಳಬಹುದೆನಿಸುತ್ತದೆ. ಪುಂಡಲೀಕರ ವಿಶಿಷ್ಟ ಕ್ಯಾಮರಾ ಕಣ್ಣಿನ, ಸುಂದರ ದೃಶ್ಯ ಮತ್ತು ಅಕ್ಷರ ಮೂಲದ ಈ ಪುಸ್ತಕದಲ್ಲಿ , ಚಾಲುಕ್ಯರ ನವರಸ ಭಾವಗಳ ದೇವಾಲಯವಾಸ್ತು ಮತ್ತು ಶಿಲ್ಪಗ ನೂರಾರು ಚಿತ್ರಗಳು, 125ಕ್ಕೂ ಹೆಚ್ಚಿನ ಶೀರ್ಷಿಕೆಗಳ ಅವಕಾಶದ ಅಡಿ ಅನಾವರಣಗೊಂಡಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಅಪರ ಅಬಕಾರಿ ಆಯುಕ್ತರಾದ ಡಾ ವೈ ಮಂಜುನಾಥ್‌, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಪ್ರೊ ಮಲ್ಲೇಪುರಂ ಜಿ ವೆಂಕಟೇಶ, ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ದೇವರ ಕೊಂಡಾರೆಡ್ಡಿ, ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕರ್ನಾಟಕ ಚಿತ್ರಕಾವ್ಯ ಅಭಿಯಾನದ ನಿರ್ದೇಶಕ ಚಂದ್ರೇಗೌಡ ಕುಲಕರ್ಣಿ, ಕಲಾ ವಿಮರ್ಶಕರಾದ ಎಚ್ ಎ ಅನಿಲಕುಮಾರ್, ಪತ್ರಕರ್ತ ಗೌರೀಶ್‌ ಅಕ್ಕಿ, ಲೇಖಕಿ ನಳಿನಿ ಡಿ, ನಟ, ಕೆ ಎಸ್ ಪರಮೇಶ್ವರ, ಹಿರಿಯ ಕಲಾವಿದರ ಪ ಸ ಕುಮಾರ್ ಉಪಸ್ಥಿತರಿರುವರು.


ಇದನ್ನೂ ಓದಿ: ಕುಟುಂಬದೊಳಗಿನ ರಚನೆಗೂ, ಸಮಾಜದ ಒಡಕುಗಳಿಗೂ ಇರುವ ನಿಕಟ ಸಂಬಂಧ ಶೋಧಿಸುವ ಮೂನಿಯಾ ಅಕ್ಲ್‌ಳ ’ಕಾಸ್ಟ ಬ್ರಾವ, ಲೆಬನಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....