Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...