Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...