Homeಮುಖಪುಟಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

ಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

- Advertisement -
- Advertisement -

ಪುಣೆಯ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯಲ್ಲಿ (MIT-WPU) ಪತ್ರಿಕೋದ್ಯಮ ವಿಭಾಗದ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಾಶ್ಮೀರಿ ಪತ್ರಕರ್ತೆ ಸಫೀನಾ ನಬಿ ಅವರಿಗೆ ನೀಡಬೇಕಿದ್ದ ಪ್ರಶಸ್ತಿಯನ್ನು ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ಕೊನೇ ಗಳಿಗೆಯಲ್ಲಿ ವಿವಿ ರದ್ದುಪಡಿಸಿದೆ.

ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಶಸ್ತಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಸ್ಕ್ರಾಲ್‌ನಲ್ಲಿ ಪ್ರಕಟವಾಗಿರುವ  ‘ದಿ ಹಾಫ್ ವಿಡೋಸ್ ಆಫ್ ಕಾಶ್ಮೀರ್’ ಎಂಬ ಶೀರ್ಷಿಕೆಯ ನಬಿ ಅವರ ಲೇಖನವು ದಶಕಗಳಿಂದ ತಮ್ಮ ಆಸ್ತಿ ಹಕ್ಕುಗಳಿಂದ ವಂಚಿತರಾಗಿರುವ ಕಾಶ್ಮೀರದ ‘ಅರೆ ವಿಧವೆಯರು’ ಎದುರಿಸುತ್ತಿರುವ ನಿರಂತರ ಹೋರಾಟಗಳ ಮೇಲೆ ಬೆಳಕು ಚೆಲ್ಲಿತ್ತು.

ಅ.11 ರಂದು ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯ ಮಾದ್ಯಮ ಮತ್ತು ಸಂವಹನ ವಿಭಾಗದ ನಿರ್ದೇಶಕರಾದ ಧೀರಜ್ ಸಿಂಗ್ ಅವರು ಫೋನ್ ಕರೆ ಮತ್ತು ಇಮೇಲ್ ಮೂಲಕ ನಬಿ ಅವರಿಗೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಹೇಳಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಂಸ್ಥೆಯು ಪ್ರಯಾಣದ ವ್ಯವಸ್ಥೆಯನ್ನು ಕೂಡ ಮಾಡಿದೆ ಎಂದು ನಬಿ ದಿ ವೈರ್ ಸುದ್ದಿ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅ.17 ರಂದು ಪುಣೆಗೆ ತೆರಳಲು ನಿರ್ಧರಿಸಲಾಗಿತ್ತು. ಆದರೆ ಅ.16 ರ ಮಧ್ಯಾಹ್ನ ಅಧ್ಯಾಪಕರೋರ್ವರು ಅವರನ್ನು ಸಂಪರ್ಕಿಸಿ  ಪ್ರಶಸ್ತಿ ರದ್ದತಿ ಬಗ್ಗೆ ತಿಳಿಸಿದ್ದಾರೆ ಮತ್ತು ಪುಣೆಗೆ ತೆರಳಬೇಕಿದ್ದ ಪ್ರಯಾಣವನ್ನು ರದ್ದುಪಡಿಸುವಂತೆ ಸೂಚಿಸಿದ್ದಾರೆ.

ನಬಿ ನಂತರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜೀಶ್ ಕುಮಾರ್ ಅವರನ್ನು ಸಂಪರ್ಕಿಸಿ, ಈ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಪ್ರಶಸ್ತಿಯನ್ನು ರದ್ದುಗೊಳಿಸಿರುವ ಬಗ್ಗೆ ಅವರು  ಖಚಿತಪಡಿಸಿದ್ದಾರೆ ಮತ್ತು ಕ್ಷಮೆ ಕೇಳಿದ್ದಾರೆ. ಪ್ರಶಸ್ತಿ ರದ್ಧತಿ ಬಗ್ಗೆ ನಬಿ ಅವರು ಕಾರಣವನ್ನು ಕೇಳಿದ್ದಾರೆ. ಇ-ಮೇಲ್‌ ಮೂಲಕ ಕಾರಣ ತಿಳಿಸುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಾಧ್ಯಾಪಕರ ಅದಕ್ಕೆ ನಿರಾಕರಿಸಿದ್ದಾರೆ. ಕೊನೆಗೆ  ವಿಶ್ವವಿದ್ಯಾನಿಲಯದಲ್ಲಿ ನನಗೆ ಸನ್ಮಾನಿಸದಂತೆ ಸಾಕಷ್ಟು ರಾಜಕೀಯ ಒತ್ತಡವಿದೆ ಎಂಬ ಕಾರಣವನ್ನು ನೀಡಿದ್ದಾರೆ ಎಂದು ಸಫೀನಾ ನಬಿ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಿದ್ದ ತೀರ್ಪುಗಾರರಿಗೂ ಅಚ್ಚರಿಯನ್ನು ಮೂಡಿಸಿದೆ.

ಇದನ್ನು ಓದಿ: ಮಣಿಪುರ ಹಿಂಸಾಚಾರ: ಕೇಂದ್ರ, ಮಣಿಪುರ ಸರ್ಕಾರಕ್ಕೆ ವಿವರಣೆ ಕೇಳಿ NHRC ನೊಟೀಸ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...