Homeಮುಖಪುಟಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

ಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

- Advertisement -
- Advertisement -

ಪುಣೆಯ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯಲ್ಲಿ (MIT-WPU) ಪತ್ರಿಕೋದ್ಯಮ ವಿಭಾಗದ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಾಶ್ಮೀರಿ ಪತ್ರಕರ್ತೆ ಸಫೀನಾ ನಬಿ ಅವರಿಗೆ ನೀಡಬೇಕಿದ್ದ ಪ್ರಶಸ್ತಿಯನ್ನು ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ಕೊನೇ ಗಳಿಗೆಯಲ್ಲಿ ವಿವಿ ರದ್ದುಪಡಿಸಿದೆ.

ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಶಸ್ತಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಸ್ಕ್ರಾಲ್‌ನಲ್ಲಿ ಪ್ರಕಟವಾಗಿರುವ  ‘ದಿ ಹಾಫ್ ವಿಡೋಸ್ ಆಫ್ ಕಾಶ್ಮೀರ್’ ಎಂಬ ಶೀರ್ಷಿಕೆಯ ನಬಿ ಅವರ ಲೇಖನವು ದಶಕಗಳಿಂದ ತಮ್ಮ ಆಸ್ತಿ ಹಕ್ಕುಗಳಿಂದ ವಂಚಿತರಾಗಿರುವ ಕಾಶ್ಮೀರದ ‘ಅರೆ ವಿಧವೆಯರು’ ಎದುರಿಸುತ್ತಿರುವ ನಿರಂತರ ಹೋರಾಟಗಳ ಮೇಲೆ ಬೆಳಕು ಚೆಲ್ಲಿತ್ತು.

ಅ.11 ರಂದು ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯ ಮಾದ್ಯಮ ಮತ್ತು ಸಂವಹನ ವಿಭಾಗದ ನಿರ್ದೇಶಕರಾದ ಧೀರಜ್ ಸಿಂಗ್ ಅವರು ಫೋನ್ ಕರೆ ಮತ್ತು ಇಮೇಲ್ ಮೂಲಕ ನಬಿ ಅವರಿಗೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಹೇಳಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಂಸ್ಥೆಯು ಪ್ರಯಾಣದ ವ್ಯವಸ್ಥೆಯನ್ನು ಕೂಡ ಮಾಡಿದೆ ಎಂದು ನಬಿ ದಿ ವೈರ್ ಸುದ್ದಿ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅ.17 ರಂದು ಪುಣೆಗೆ ತೆರಳಲು ನಿರ್ಧರಿಸಲಾಗಿತ್ತು. ಆದರೆ ಅ.16 ರ ಮಧ್ಯಾಹ್ನ ಅಧ್ಯಾಪಕರೋರ್ವರು ಅವರನ್ನು ಸಂಪರ್ಕಿಸಿ  ಪ್ರಶಸ್ತಿ ರದ್ದತಿ ಬಗ್ಗೆ ತಿಳಿಸಿದ್ದಾರೆ ಮತ್ತು ಪುಣೆಗೆ ತೆರಳಬೇಕಿದ್ದ ಪ್ರಯಾಣವನ್ನು ರದ್ದುಪಡಿಸುವಂತೆ ಸೂಚಿಸಿದ್ದಾರೆ.

ನಬಿ ನಂತರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜೀಶ್ ಕುಮಾರ್ ಅವರನ್ನು ಸಂಪರ್ಕಿಸಿ, ಈ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಪ್ರಶಸ್ತಿಯನ್ನು ರದ್ದುಗೊಳಿಸಿರುವ ಬಗ್ಗೆ ಅವರು  ಖಚಿತಪಡಿಸಿದ್ದಾರೆ ಮತ್ತು ಕ್ಷಮೆ ಕೇಳಿದ್ದಾರೆ. ಪ್ರಶಸ್ತಿ ರದ್ಧತಿ ಬಗ್ಗೆ ನಬಿ ಅವರು ಕಾರಣವನ್ನು ಕೇಳಿದ್ದಾರೆ. ಇ-ಮೇಲ್‌ ಮೂಲಕ ಕಾರಣ ತಿಳಿಸುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಾಧ್ಯಾಪಕರ ಅದಕ್ಕೆ ನಿರಾಕರಿಸಿದ್ದಾರೆ. ಕೊನೆಗೆ  ವಿಶ್ವವಿದ್ಯಾನಿಲಯದಲ್ಲಿ ನನಗೆ ಸನ್ಮಾನಿಸದಂತೆ ಸಾಕಷ್ಟು ರಾಜಕೀಯ ಒತ್ತಡವಿದೆ ಎಂಬ ಕಾರಣವನ್ನು ನೀಡಿದ್ದಾರೆ ಎಂದು ಸಫೀನಾ ನಬಿ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಿದ್ದ ತೀರ್ಪುಗಾರರಿಗೂ ಅಚ್ಚರಿಯನ್ನು ಮೂಡಿಸಿದೆ.

ಇದನ್ನು ಓದಿ: ಮಣಿಪುರ ಹಿಂಸಾಚಾರ: ಕೇಂದ್ರ, ಮಣಿಪುರ ಸರ್ಕಾರಕ್ಕೆ ವಿವರಣೆ ಕೇಳಿ NHRC ನೊಟೀಸ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...