Homeಮುಖಪುಟಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

ಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

- Advertisement -
- Advertisement -

ಪುಣೆಯ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯಲ್ಲಿ (MIT-WPU) ಪತ್ರಿಕೋದ್ಯಮ ವಿಭಾಗದ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಾಶ್ಮೀರಿ ಪತ್ರಕರ್ತೆ ಸಫೀನಾ ನಬಿ ಅವರಿಗೆ ನೀಡಬೇಕಿದ್ದ ಪ್ರಶಸ್ತಿಯನ್ನು ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ಕೊನೇ ಗಳಿಗೆಯಲ್ಲಿ ವಿವಿ ರದ್ದುಪಡಿಸಿದೆ.

ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಶಸ್ತಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಸ್ಕ್ರಾಲ್‌ನಲ್ಲಿ ಪ್ರಕಟವಾಗಿರುವ  ‘ದಿ ಹಾಫ್ ವಿಡೋಸ್ ಆಫ್ ಕಾಶ್ಮೀರ್’ ಎಂಬ ಶೀರ್ಷಿಕೆಯ ನಬಿ ಅವರ ಲೇಖನವು ದಶಕಗಳಿಂದ ತಮ್ಮ ಆಸ್ತಿ ಹಕ್ಕುಗಳಿಂದ ವಂಚಿತರಾಗಿರುವ ಕಾಶ್ಮೀರದ ‘ಅರೆ ವಿಧವೆಯರು’ ಎದುರಿಸುತ್ತಿರುವ ನಿರಂತರ ಹೋರಾಟಗಳ ಮೇಲೆ ಬೆಳಕು ಚೆಲ್ಲಿತ್ತು.

ಅ.11 ರಂದು ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯ ಮಾದ್ಯಮ ಮತ್ತು ಸಂವಹನ ವಿಭಾಗದ ನಿರ್ದೇಶಕರಾದ ಧೀರಜ್ ಸಿಂಗ್ ಅವರು ಫೋನ್ ಕರೆ ಮತ್ತು ಇಮೇಲ್ ಮೂಲಕ ನಬಿ ಅವರಿಗೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಹೇಳಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಂಸ್ಥೆಯು ಪ್ರಯಾಣದ ವ್ಯವಸ್ಥೆಯನ್ನು ಕೂಡ ಮಾಡಿದೆ ಎಂದು ನಬಿ ದಿ ವೈರ್ ಸುದ್ದಿ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅ.17 ರಂದು ಪುಣೆಗೆ ತೆರಳಲು ನಿರ್ಧರಿಸಲಾಗಿತ್ತು. ಆದರೆ ಅ.16 ರ ಮಧ್ಯಾಹ್ನ ಅಧ್ಯಾಪಕರೋರ್ವರು ಅವರನ್ನು ಸಂಪರ್ಕಿಸಿ  ಪ್ರಶಸ್ತಿ ರದ್ದತಿ ಬಗ್ಗೆ ತಿಳಿಸಿದ್ದಾರೆ ಮತ್ತು ಪುಣೆಗೆ ತೆರಳಬೇಕಿದ್ದ ಪ್ರಯಾಣವನ್ನು ರದ್ದುಪಡಿಸುವಂತೆ ಸೂಚಿಸಿದ್ದಾರೆ.

ನಬಿ ನಂತರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜೀಶ್ ಕುಮಾರ್ ಅವರನ್ನು ಸಂಪರ್ಕಿಸಿ, ಈ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಪ್ರಶಸ್ತಿಯನ್ನು ರದ್ದುಗೊಳಿಸಿರುವ ಬಗ್ಗೆ ಅವರು  ಖಚಿತಪಡಿಸಿದ್ದಾರೆ ಮತ್ತು ಕ್ಷಮೆ ಕೇಳಿದ್ದಾರೆ. ಪ್ರಶಸ್ತಿ ರದ್ಧತಿ ಬಗ್ಗೆ ನಬಿ ಅವರು ಕಾರಣವನ್ನು ಕೇಳಿದ್ದಾರೆ. ಇ-ಮೇಲ್‌ ಮೂಲಕ ಕಾರಣ ತಿಳಿಸುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಾಧ್ಯಾಪಕರ ಅದಕ್ಕೆ ನಿರಾಕರಿಸಿದ್ದಾರೆ. ಕೊನೆಗೆ  ವಿಶ್ವವಿದ್ಯಾನಿಲಯದಲ್ಲಿ ನನಗೆ ಸನ್ಮಾನಿಸದಂತೆ ಸಾಕಷ್ಟು ರಾಜಕೀಯ ಒತ್ತಡವಿದೆ ಎಂಬ ಕಾರಣವನ್ನು ನೀಡಿದ್ದಾರೆ ಎಂದು ಸಫೀನಾ ನಬಿ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಿದ್ದ ತೀರ್ಪುಗಾರರಿಗೂ ಅಚ್ಚರಿಯನ್ನು ಮೂಡಿಸಿದೆ.

ಇದನ್ನು ಓದಿ: ಮಣಿಪುರ ಹಿಂಸಾಚಾರ: ಕೇಂದ್ರ, ಮಣಿಪುರ ಸರ್ಕಾರಕ್ಕೆ ವಿವರಣೆ ಕೇಳಿ NHRC ನೊಟೀಸ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...