Homeಮುಖಪುಟಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

ಹಿಂದುತ್ವ ಗುಂಪಿನಿಂದ ವಿರೋಧ: ಕಾಶ್ಮೀರಿ ಪತ್ರಕರ್ತೆ ಸಫೀನಾಗೆ ನೀಡಬೇಕಿದ್ದ ಪ್ರಶಸ್ತಿ ರದ್ದುಗೊಳಿಸಿದ ಪುಣೆ ವಿವಿ

- Advertisement -
- Advertisement -

ಪುಣೆಯ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯಲ್ಲಿ (MIT-WPU) ಪತ್ರಿಕೋದ್ಯಮ ವಿಭಾಗದ ಮಾಧ್ಯಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಾಶ್ಮೀರಿ ಪತ್ರಕರ್ತೆ ಸಫೀನಾ ನಬಿ ಅವರಿಗೆ ನೀಡಬೇಕಿದ್ದ ಪ್ರಶಸ್ತಿಯನ್ನು ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ಕೊನೇ ಗಳಿಗೆಯಲ್ಲಿ ವಿವಿ ರದ್ದುಪಡಿಸಿದೆ.

ಹಿಂದುತ್ವ ಗುಂಪುಗಳ ಒತ್ತಡಕ್ಕೆ ಮಣಿದು ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಶಸ್ತಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಸ್ಕ್ರಾಲ್‌ನಲ್ಲಿ ಪ್ರಕಟವಾಗಿರುವ  ‘ದಿ ಹಾಫ್ ವಿಡೋಸ್ ಆಫ್ ಕಾಶ್ಮೀರ್’ ಎಂಬ ಶೀರ್ಷಿಕೆಯ ನಬಿ ಅವರ ಲೇಖನವು ದಶಕಗಳಿಂದ ತಮ್ಮ ಆಸ್ತಿ ಹಕ್ಕುಗಳಿಂದ ವಂಚಿತರಾಗಿರುವ ಕಾಶ್ಮೀರದ ‘ಅರೆ ವಿಧವೆಯರು’ ಎದುರಿಸುತ್ತಿರುವ ನಿರಂತರ ಹೋರಾಟಗಳ ಮೇಲೆ ಬೆಳಕು ಚೆಲ್ಲಿತ್ತು.

ಅ.11 ರಂದು ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ವರ್ಲ್ಡ್ ಪೀಸ್ ಯೂನಿವರ್ಸಿಟಿಯ ಮಾದ್ಯಮ ಮತ್ತು ಸಂವಹನ ವಿಭಾಗದ ನಿರ್ದೇಶಕರಾದ ಧೀರಜ್ ಸಿಂಗ್ ಅವರು ಫೋನ್ ಕರೆ ಮತ್ತು ಇಮೇಲ್ ಮೂಲಕ ನಬಿ ಅವರಿಗೆ ಪ್ರಶಸ್ತಿ ಸಿಕ್ಕಿರುವ ಬಗ್ಗೆ ಹೇಳಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಂಸ್ಥೆಯು ಪ್ರಯಾಣದ ವ್ಯವಸ್ಥೆಯನ್ನು ಕೂಡ ಮಾಡಿದೆ ಎಂದು ನಬಿ ದಿ ವೈರ್ ಸುದ್ದಿ ವೆಬ್‌ಸೈಟ್‌ಗೆ ತಿಳಿಸಿದ್ದಾರೆ.

ಅ.17 ರಂದು ಪುಣೆಗೆ ತೆರಳಲು ನಿರ್ಧರಿಸಲಾಗಿತ್ತು. ಆದರೆ ಅ.16 ರ ಮಧ್ಯಾಹ್ನ ಅಧ್ಯಾಪಕರೋರ್ವರು ಅವರನ್ನು ಸಂಪರ್ಕಿಸಿ  ಪ್ರಶಸ್ತಿ ರದ್ದತಿ ಬಗ್ಗೆ ತಿಳಿಸಿದ್ದಾರೆ ಮತ್ತು ಪುಣೆಗೆ ತೆರಳಬೇಕಿದ್ದ ಪ್ರಯಾಣವನ್ನು ರದ್ದುಪಡಿಸುವಂತೆ ಸೂಚಿಸಿದ್ದಾರೆ.

ನಬಿ ನಂತರ ವಿವಿಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜೀಶ್ ಕುಮಾರ್ ಅವರನ್ನು ಸಂಪರ್ಕಿಸಿ, ಈ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಪ್ರಶಸ್ತಿಯನ್ನು ರದ್ದುಗೊಳಿಸಿರುವ ಬಗ್ಗೆ ಅವರು  ಖಚಿತಪಡಿಸಿದ್ದಾರೆ ಮತ್ತು ಕ್ಷಮೆ ಕೇಳಿದ್ದಾರೆ. ಪ್ರಶಸ್ತಿ ರದ್ಧತಿ ಬಗ್ಗೆ ನಬಿ ಅವರು ಕಾರಣವನ್ನು ಕೇಳಿದ್ದಾರೆ. ಇ-ಮೇಲ್‌ ಮೂಲಕ ಕಾರಣ ತಿಳಿಸುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಾಧ್ಯಾಪಕರ ಅದಕ್ಕೆ ನಿರಾಕರಿಸಿದ್ದಾರೆ. ಕೊನೆಗೆ  ವಿಶ್ವವಿದ್ಯಾನಿಲಯದಲ್ಲಿ ನನಗೆ ಸನ್ಮಾನಿಸದಂತೆ ಸಾಕಷ್ಟು ರಾಜಕೀಯ ಒತ್ತಡವಿದೆ ಎಂಬ ಕಾರಣವನ್ನು ನೀಡಿದ್ದಾರೆ ಎಂದು ಸಫೀನಾ ನಬಿ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಪ್ರಶಸ್ತಿ ವಿಜೇತರನ್ನು ಆಯ್ಕೆಮಾಡಿದ್ದ ತೀರ್ಪುಗಾರರಿಗೂ ಅಚ್ಚರಿಯನ್ನು ಮೂಡಿಸಿದೆ.

ಇದನ್ನು ಓದಿ: ಮಣಿಪುರ ಹಿಂಸಾಚಾರ: ಕೇಂದ್ರ, ಮಣಿಪುರ ಸರ್ಕಾರಕ್ಕೆ ವಿವರಣೆ ಕೇಳಿ NHRC ನೊಟೀಸ್

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...