Homeಮುಖಪುಟಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

ಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎನ್ನಲಾದ ಪುಣೆಯ ಮುಂಡ್ವಾದಲ್ಲಿನ ವಿವಾದಾತ್ಮಕ ಭೂ ವ್ಯವಹಾರದ ತನಿಖೆ ನಡೆಸುತ್ತಿರುವ ಎರಡು ಸಮಿತಿಗಳಲ್ಲಿ ಮೊದಲನೆಯದು, ಮಂಗಳವಾರ (ನವೆಂಬರ್ 18) ಸಲ್ಲಿಸಿದ ವರದಿಯಲ್ಲಿ ಅಮೇಡಿಯಾ ಎಂಟರ್‌ಪ್ರೈಸಸ್‌ ಎಲ್‌ಎಲ್‌ಪಿಯ ದಿಗ್ವಿಜಯ್ ಪಾಟೀಲ್, ಶೀತಲ್ ತೇಜ್ವಾನಿ ಮತ್ತು ಸಬ್-ರಿಜಿಸ್ಟ್ರಾರ್ ರವೀಂದ್ರ ತರು ವಿರುದ್ಧ ದೋಷಾರೋಪಣೆ ಮಾಡಿದೆ ಎಂದು ವರದಿಯಾಗಿದೆ.

ಗಮನಾರ್ಹವಾಗಿ, ಈ ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯಂತೆ, ವರದಿಯಲ್ಲೂ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ವರದಿ ಹೇಳಿದೆ.

ತೇಜ್ವಾನಿ ಅವರು ಮೂಲ 272 ಜನ ಮಹಾರ್ ವಾಟಂಡಾರ್‌ಗಳ (ಮಹಾರ್ ವತನ್ ಭೂಮಿಯ ಮೂಲ ಹಕ್ಕುದಾರರು) ಪರವಾಗಿ ಪವರ್ ಆಫ್ ಅಟಾರ್ನಿ (ಅಧಿಕಾರ ಪತ್ರ) ಹೊಂದಿದ್ದರು. ಪಾಟೀಲ್ ಅವರು ತಮ್ಮ ಕಂಪನಿಯ ಪರವಾಗಿ ದಾಖಲೆಗಳ ಮೇಲೆ ಸಹಿ ಹಾಕಿದ್ದಾರೆ. ಆ ಕಂಪನಿಯಲ್ಲಿ ಪಾರ್ಥ ಪವಾರ್ ಕೂಡ ಡೈರೆಕ್ಟರ್ (ನಿರ್ದೇಶಕ) ಆಗಿದ್ದಾರೆ.

ಸರ್ಕಾರವು ಸ್ವಾಧೀನಪಡಿಸಿಕೊಂಡು ಭಾರತೀಯ ಸಸ್ಯಶಾಸ್ತ್ರ ಸಮೀಕ್ಷೆಗೆ ಗುತ್ತಿಗೆಗೆ ಪಡೆದಿರುವ ಭೂಮಿಯನ್ನು ಈ ರೀತಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತನಿಖಾ ಸಮಿತಿಯ ನೇತೃತ್ವವನ್ನು ನೋಂದಣಿ ಜಂಟಿ ಮಹಾನಿರೀಕ್ಷಕ ರಾಜೇಂದ್ರ ಮುಥೆ ವಹಿಸಿದ್ದರು. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ ಸುಮಾರು 1,800 ಕೋಟಿ ರೂಪಾಯಿ ಬೆಲೆ ಬಾಳುವ 40 ಎಕರೆ ಸರ್ಕಾರಿ ಭೂಮಿಯನ್ನು ಒಳಗೊಂಡ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ “ಬಹು ಅಕ್ರಮಗಳು ಮತ್ತು ನಿಬಂಧನೆಗಳ ಉಲ್ಲಂಘನೆ” ನಡೆದಿರುವುದನ್ನು ಅದು ಎತ್ತಿ ತೋರಿಸಿದೆ.

ಸರ್ಕಾರಿ ಸ್ವಾಮ್ಯದ 43 ಎಕರೆ ಜಮೀನನ್ನು ಅಮೇಡಿಯಾ ಎಂಟರ್‌ಪ್ರೈಸಸ್ ಎಲ್‌ಎಲ್‌ಪಿಗೆ 300 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ. ಇದು ಜಮೀನಿನ ಅಂದಾಜು ಮಾರುಕಟ್ಟೆ ಮೌಲ್ಯ 1,800 ಕೋಟಿ ರೂ.ಗಳಿಗಿಂತ ಬಹಳ ಕಡಿಮೆಯಾಗಿದೆ.

300 ಕೋಟಿ ರೂಪಾಯಿಗಳ ಘೋಷಿತ ಒಪ್ಪಂದದ ಮೌಲ್ಯವು ಸುಮಾರು 21 ಕೋಟಿ ರೂಪಾಯಿಗಳ ಮುದ್ರಾಂಕ ಶುಲ್ಕ ಮತ್ತು ಸಂಬಂಧಿತ ತೆರಿಗೆಗಳನ್ನು ಒಳಗೊಳ್ಳಬೇಕಿತ್ತು. ಆದರೆ, ತನಿಖಾಧಿಕಾರಿಗಳು ಈ ಪತ್ರವನ್ನು 500 ರೂಪಾಯಿಗಳ ಟೋಕನ್ ಮುದ್ರಾಂಕ ಶುಲ್ಕ ಮತ್ತು 30,000 ರೂಪಾಯಿಗಳ ನೋಂದಣಿ ಶುಲ್ಕದೊಂದಿಗೆ ನೋಂದಾಯಿಸಲಾಗಿದೆ ಎಂದು ಕಂಡುಕೊಂಡಿದ್ದಾರೆ. ಇದರಿಂದಾಗಿ ರಾಜ್ಯ ಖಜಾನೆಗೆ ಭಾರಿ ನಷ್ಟವಾಗಿದೆ.

ಪಾರ್ಥ್ ಪವಾರ್ ಅವರನ್ನು ಅಮೇಡಿಯಾದಲ್ಲಿ ಪಾಲುದಾರ ಎಂದು ಪಟ್ಟಿ ಮಾಡಲಾಗಿದೆ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬರುವುದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಪರಿಣಾಮವಾಗಿ, ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

“ನಮಗೆ ಲಭ್ಯವಾದ ವರದಿಯ ಒಂದು ಭಾಗದ ಪ್ರಕಾರ, ಭೂಮಿ ವ್ಯವಹಾರಗಳಲ್ಲಿ ಸ್ಟಾಂಪ್ ಡ್ಯೂಟಿ ಮನ್ನಾ ಕೋರಿದ ಪ್ರಕರಣಗಳಲ್ಲಿ, ಸಂಬಂಧಿತ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಆ ವ್ಯವಹಾರಕ್ಕೆ ಸ್ಟಾಂಪ್ ಕಲೆಕ್ಟರ್ ಅನುಮೋದನೆ ನೀಡಿಯೇ ತೀರಬೇಕು. ಅಂದರೆ, ಸ್ಟಾಂಪ್ ಡ್ಯೂಟಿ ಮನ್ನಾ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ಭೂಮಿ ಖರೀದಿ-ಮಾರಾಟ/ದಾಖಲಾತಿ ಪ್ರಕರಣಗಳಲ್ಲಿ ಕಲೆಕ್ಟರ್ ಆಫ್ ಸ್ಟಾಂಪ್ಸ್ ಅವರ ಅನುಮತಿ ಕಡ್ಡಾಯವಾಗಿರುತ್ತದೆ. ಇಲ್ಲದಿದ್ದಲ್ಲಿ ಆ ವ್ಯವಹಾರ ಮಾನ್ಯವಾಗುವುದಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“ರಾಜ್ಯದಲ್ಲಿ ಆದಾಯ ಸಂಗ್ರಹಣೆಗೆ ಮುಖ್ಯವಾದ ಜಿಲ್ಲೆಗಳಲ್ಲಿ ಜಂಟಿ ಉಪ ನೋಂದಣಿದಾರರ ಹುದ್ದೆಗಳಿಗೆ ಅರ್ಹ ಹಿರಿಯ ಮತ್ತು ಅನುಭವಿ ಜಂಟಿ ಉಪ ನೋಂದಣಿದಾರರನ್ನು ನೇಮಿಸಬೇಕು ಮತ್ತು ಈ ಹುದ್ದೆಗಳು ಖಾಲಿಯಾಗಿ ಉಳಿಯದಂತೆ ನೋಡಿಕೊಳ್ಳಬೇಕು” ಎಂದು ವರದಿಯು ಶಿಫಾರಸು ಮಾಡಿದೆ. 1908ರ ನೋಂದಣಿ ಕಾಯ್ದೆಯ ಸೆಕ್ಷನ್ ಕೆ, ಭೂಮಿಯ 7/12 ಸಾರವು ಒಂದು ತಿಂಗಳಿಗಿಂತ ಹಳೆಯದಾಗಿರದಿದ್ದರೆ ಮಾತ್ರ ಅಂತಹ ದಾಖಲಾತಿಯನ್ನು ಪೂರ್ಣಗೊಳಿಸಬಹುದು ಎಂದು ಹೇಳುತ್ತದೆ” ಎಂದಿದೆ.

“ವರದಿಯು 1908ರ ನೋಂದಣಿ ಕಾಯ್ದೆಯಲ್ಲಿ ಮಾರ್ಪಾಡುಗಳನ್ನು ಶಿಫಾರಸು ಮಾಡಿದೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“28/04/2025ರ ತಿದ್ದುಪಡಿಯ ಪ್ರಕಾರ, 1908ರ ನೋಂದಣಿ ಕಾಯ್ದೆಯಲ್ಲಿ ಸೆಕ್ಷನ್ 18ಎ ಅನ್ನು ಸೇರಿಸಲಾಗಿದೆ. ಅದರ ಉಪವಿಭಾಗ (1) ರ ಷರತ್ತು (ಬಿ) ಪ್ರಕಾರ, ಸರ್ಕಾರ ಮತ್ತು ಅಂತಹುದೇ ಅಧಿಕಾರಿಗಳ ಒಡೆತನದ ಆಸ್ತಿಗಳ ಖರೀದಿ ಮತ್ತು ಮಾರಾಟ ಇತ್ಯಾದಿಗಳ ಪತ್ರಗಳನ್ನು ದ್ವಿತೀಯ ನೋಂದಣಿದಾರರು ನೋಂದಾಯಿಸದಿರುವುದು ಕಡ್ಡಾಯವಾಗಿದೆ” ಎಂದು ಅದು ಹೇಳಿದೆ” ಎಂದು ವಿವರಿಸಿದೆ.

“ಆದಾಗ್ಯೂ, ಈ ನಿಬಂಧನೆಯು ‘ಮಾಲೀಕತ್ವ’ಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರವು ಇನ್ನೂ ‘ಮಾಲೀಕತ್ವ’ ಹೊಂದಿಲ್ಲದ ಆದರೆ ಸರ್ಕಾರದ ಸ್ವಾಧೀನದಲ್ಲಿರುವ ಮತ್ತು/ಅಥವಾ ಇತರ ಹಿತಾಸಕ್ತಿಗಳನ್ನು ಹೊಂದಿರುವ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸದರಿ ಕಾಯಿದೆಯಲ್ಲಿ ಸ್ಪಷ್ಟವಾದ ನಿಬಂಧನೆಯನ್ನು ಮಾಡುವುದು ಅಗತ್ಯವೆಂದು ತೋರುತ್ತದೆ” ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...