Homeಮುಖಪುಟಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

ಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎನ್ನಲಾದ ಪುಣೆಯ ಮುಂಡ್ವಾದಲ್ಲಿನ ವಿವಾದಾತ್ಮಕ ಭೂ ವ್ಯವಹಾರದ ತನಿಖೆ ನಡೆಸುತ್ತಿರುವ ಎರಡು ಸಮಿತಿಗಳಲ್ಲಿ ಮೊದಲನೆಯದು, ಮಂಗಳವಾರ (ನವೆಂಬರ್ 18) ಸಲ್ಲಿಸಿದ ವರದಿಯಲ್ಲಿ ಅಮೇಡಿಯಾ ಎಂಟರ್‌ಪ್ರೈಸಸ್‌ ಎಲ್‌ಎಲ್‌ಪಿಯ ದಿಗ್ವಿಜಯ್ ಪಾಟೀಲ್, ಶೀತಲ್ ತೇಜ್ವಾನಿ ಮತ್ತು ಸಬ್-ರಿಜಿಸ್ಟ್ರಾರ್ ರವೀಂದ್ರ ತರು ವಿರುದ್ಧ ದೋಷಾರೋಪಣೆ ಮಾಡಿದೆ ಎಂದು ವರದಿಯಾಗಿದೆ.

ಗಮನಾರ್ಹವಾಗಿ, ಈ ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯಂತೆ, ವರದಿಯಲ್ಲೂ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ವರದಿ ಹೇಳಿದೆ.

ತೇಜ್ವಾನಿ ಅವರು ಮೂಲ 272 ಜನ ಮಹಾರ್ ವಾಟಂಡಾರ್‌ಗಳ (ಮಹಾರ್ ವತನ್ ಭೂಮಿಯ ಮೂಲ ಹಕ್ಕುದಾರರು) ಪರವಾಗಿ ಪವರ್ ಆಫ್ ಅಟಾರ್ನಿ (ಅಧಿಕಾರ ಪತ್ರ) ಹೊಂದಿದ್ದರು. ಪಾಟೀಲ್ ಅವರು ತಮ್ಮ ಕಂಪನಿಯ ಪರವಾಗಿ ದಾಖಲೆಗಳ ಮೇಲೆ ಸಹಿ ಹಾಕಿದ್ದಾರೆ. ಆ ಕಂಪನಿಯಲ್ಲಿ ಪಾರ್ಥ ಪವಾರ್ ಕೂಡ ಡೈರೆಕ್ಟರ್ (ನಿರ್ದೇಶಕ) ಆಗಿದ್ದಾರೆ.

ಸರ್ಕಾರವು ಸ್ವಾಧೀನಪಡಿಸಿಕೊಂಡು ಭಾರತೀಯ ಸಸ್ಯಶಾಸ್ತ್ರ ಸಮೀಕ್ಷೆಗೆ ಗುತ್ತಿಗೆಗೆ ಪಡೆದಿರುವ ಭೂಮಿಯನ್ನು ಈ ರೀತಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತನಿಖಾ ಸಮಿತಿಯ ನೇತೃತ್ವವನ್ನು ನೋಂದಣಿ ಜಂಟಿ ಮಹಾನಿರೀಕ್ಷಕ ರಾಜೇಂದ್ರ ಮುಥೆ ವಹಿಸಿದ್ದರು. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ ಸುಮಾರು 1,800 ಕೋಟಿ ರೂಪಾಯಿ ಬೆಲೆ ಬಾಳುವ 40 ಎಕರೆ ಸರ್ಕಾರಿ ಭೂಮಿಯನ್ನು ಒಳಗೊಂಡ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ “ಬಹು ಅಕ್ರಮಗಳು ಮತ್ತು ನಿಬಂಧನೆಗಳ ಉಲ್ಲಂಘನೆ” ನಡೆದಿರುವುದನ್ನು ಅದು ಎತ್ತಿ ತೋರಿಸಿದೆ.

ಸರ್ಕಾರಿ ಸ್ವಾಮ್ಯದ 43 ಎಕರೆ ಜಮೀನನ್ನು ಅಮೇಡಿಯಾ ಎಂಟರ್‌ಪ್ರೈಸಸ್ ಎಲ್‌ಎಲ್‌ಪಿಗೆ 300 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ. ಇದು ಜಮೀನಿನ ಅಂದಾಜು ಮಾರುಕಟ್ಟೆ ಮೌಲ್ಯ 1,800 ಕೋಟಿ ರೂ.ಗಳಿಗಿಂತ ಬಹಳ ಕಡಿಮೆಯಾಗಿದೆ.

300 ಕೋಟಿ ರೂಪಾಯಿಗಳ ಘೋಷಿತ ಒಪ್ಪಂದದ ಮೌಲ್ಯವು ಸುಮಾರು 21 ಕೋಟಿ ರೂಪಾಯಿಗಳ ಮುದ್ರಾಂಕ ಶುಲ್ಕ ಮತ್ತು ಸಂಬಂಧಿತ ತೆರಿಗೆಗಳನ್ನು ಒಳಗೊಳ್ಳಬೇಕಿತ್ತು. ಆದರೆ, ತನಿಖಾಧಿಕಾರಿಗಳು ಈ ಪತ್ರವನ್ನು 500 ರೂಪಾಯಿಗಳ ಟೋಕನ್ ಮುದ್ರಾಂಕ ಶುಲ್ಕ ಮತ್ತು 30,000 ರೂಪಾಯಿಗಳ ನೋಂದಣಿ ಶುಲ್ಕದೊಂದಿಗೆ ನೋಂದಾಯಿಸಲಾಗಿದೆ ಎಂದು ಕಂಡುಕೊಂಡಿದ್ದಾರೆ. ಇದರಿಂದಾಗಿ ರಾಜ್ಯ ಖಜಾನೆಗೆ ಭಾರಿ ನಷ್ಟವಾಗಿದೆ.

ಪಾರ್ಥ್ ಪವಾರ್ ಅವರನ್ನು ಅಮೇಡಿಯಾದಲ್ಲಿ ಪಾಲುದಾರ ಎಂದು ಪಟ್ಟಿ ಮಾಡಲಾಗಿದೆ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬರುವುದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಪರಿಣಾಮವಾಗಿ, ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

“ನಮಗೆ ಲಭ್ಯವಾದ ವರದಿಯ ಒಂದು ಭಾಗದ ಪ್ರಕಾರ, ಭೂಮಿ ವ್ಯವಹಾರಗಳಲ್ಲಿ ಸ್ಟಾಂಪ್ ಡ್ಯೂಟಿ ಮನ್ನಾ ಕೋರಿದ ಪ್ರಕರಣಗಳಲ್ಲಿ, ಸಂಬಂಧಿತ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಆ ವ್ಯವಹಾರಕ್ಕೆ ಸ್ಟಾಂಪ್ ಕಲೆಕ್ಟರ್ ಅನುಮೋದನೆ ನೀಡಿಯೇ ತೀರಬೇಕು. ಅಂದರೆ, ಸ್ಟಾಂಪ್ ಡ್ಯೂಟಿ ಮನ್ನಾ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ಭೂಮಿ ಖರೀದಿ-ಮಾರಾಟ/ದಾಖಲಾತಿ ಪ್ರಕರಣಗಳಲ್ಲಿ ಕಲೆಕ್ಟರ್ ಆಫ್ ಸ್ಟಾಂಪ್ಸ್ ಅವರ ಅನುಮತಿ ಕಡ್ಡಾಯವಾಗಿರುತ್ತದೆ. ಇಲ್ಲದಿದ್ದಲ್ಲಿ ಆ ವ್ಯವಹಾರ ಮಾನ್ಯವಾಗುವುದಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“ರಾಜ್ಯದಲ್ಲಿ ಆದಾಯ ಸಂಗ್ರಹಣೆಗೆ ಮುಖ್ಯವಾದ ಜಿಲ್ಲೆಗಳಲ್ಲಿ ಜಂಟಿ ಉಪ ನೋಂದಣಿದಾರರ ಹುದ್ದೆಗಳಿಗೆ ಅರ್ಹ ಹಿರಿಯ ಮತ್ತು ಅನುಭವಿ ಜಂಟಿ ಉಪ ನೋಂದಣಿದಾರರನ್ನು ನೇಮಿಸಬೇಕು ಮತ್ತು ಈ ಹುದ್ದೆಗಳು ಖಾಲಿಯಾಗಿ ಉಳಿಯದಂತೆ ನೋಡಿಕೊಳ್ಳಬೇಕು” ಎಂದು ವರದಿಯು ಶಿಫಾರಸು ಮಾಡಿದೆ. 1908ರ ನೋಂದಣಿ ಕಾಯ್ದೆಯ ಸೆಕ್ಷನ್ ಕೆ, ಭೂಮಿಯ 7/12 ಸಾರವು ಒಂದು ತಿಂಗಳಿಗಿಂತ ಹಳೆಯದಾಗಿರದಿದ್ದರೆ ಮಾತ್ರ ಅಂತಹ ದಾಖಲಾತಿಯನ್ನು ಪೂರ್ಣಗೊಳಿಸಬಹುದು ಎಂದು ಹೇಳುತ್ತದೆ” ಎಂದಿದೆ.

“ವರದಿಯು 1908ರ ನೋಂದಣಿ ಕಾಯ್ದೆಯಲ್ಲಿ ಮಾರ್ಪಾಡುಗಳನ್ನು ಶಿಫಾರಸು ಮಾಡಿದೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“28/04/2025ರ ತಿದ್ದುಪಡಿಯ ಪ್ರಕಾರ, 1908ರ ನೋಂದಣಿ ಕಾಯ್ದೆಯಲ್ಲಿ ಸೆಕ್ಷನ್ 18ಎ ಅನ್ನು ಸೇರಿಸಲಾಗಿದೆ. ಅದರ ಉಪವಿಭಾಗ (1) ರ ಷರತ್ತು (ಬಿ) ಪ್ರಕಾರ, ಸರ್ಕಾರ ಮತ್ತು ಅಂತಹುದೇ ಅಧಿಕಾರಿಗಳ ಒಡೆತನದ ಆಸ್ತಿಗಳ ಖರೀದಿ ಮತ್ತು ಮಾರಾಟ ಇತ್ಯಾದಿಗಳ ಪತ್ರಗಳನ್ನು ದ್ವಿತೀಯ ನೋಂದಣಿದಾರರು ನೋಂದಾಯಿಸದಿರುವುದು ಕಡ್ಡಾಯವಾಗಿದೆ” ಎಂದು ಅದು ಹೇಳಿದೆ” ಎಂದು ವಿವರಿಸಿದೆ.

“ಆದಾಗ್ಯೂ, ಈ ನಿಬಂಧನೆಯು ‘ಮಾಲೀಕತ್ವ’ಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರವು ಇನ್ನೂ ‘ಮಾಲೀಕತ್ವ’ ಹೊಂದಿಲ್ಲದ ಆದರೆ ಸರ್ಕಾರದ ಸ್ವಾಧೀನದಲ್ಲಿರುವ ಮತ್ತು/ಅಥವಾ ಇತರ ಹಿತಾಸಕ್ತಿಗಳನ್ನು ಹೊಂದಿರುವ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸದರಿ ಕಾಯಿದೆಯಲ್ಲಿ ಸ್ಪಷ್ಟವಾದ ನಿಬಂಧನೆಯನ್ನು ಮಾಡುವುದು ಅಗತ್ಯವೆಂದು ತೋರುತ್ತದೆ” ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...