Homeಮುಖಪುಟಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

ಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎನ್ನಲಾದ ಪುಣೆಯ ಮುಂಡ್ವಾದಲ್ಲಿನ ವಿವಾದಾತ್ಮಕ ಭೂ ವ್ಯವಹಾರದ ತನಿಖೆ ನಡೆಸುತ್ತಿರುವ ಎರಡು ಸಮಿತಿಗಳಲ್ಲಿ ಮೊದಲನೆಯದು, ಮಂಗಳವಾರ (ನವೆಂಬರ್ 18) ಸಲ್ಲಿಸಿದ ವರದಿಯಲ್ಲಿ ಅಮೇಡಿಯಾ ಎಂಟರ್‌ಪ್ರೈಸಸ್‌ ಎಲ್‌ಎಲ್‌ಪಿಯ ದಿಗ್ವಿಜಯ್ ಪಾಟೀಲ್, ಶೀತಲ್ ತೇಜ್ವಾನಿ ಮತ್ತು ಸಬ್-ರಿಜಿಸ್ಟ್ರಾರ್ ರವೀಂದ್ರ ತರು ವಿರುದ್ಧ ದೋಷಾರೋಪಣೆ ಮಾಡಿದೆ ಎಂದು ವರದಿಯಾಗಿದೆ.

ಗಮನಾರ್ಹವಾಗಿ, ಈ ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯಂತೆ, ವರದಿಯಲ್ಲೂ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ವರದಿ ಹೇಳಿದೆ.

ತೇಜ್ವಾನಿ ಅವರು ಮೂಲ 272 ಜನ ಮಹಾರ್ ವಾಟಂಡಾರ್‌ಗಳ (ಮಹಾರ್ ವತನ್ ಭೂಮಿಯ ಮೂಲ ಹಕ್ಕುದಾರರು) ಪರವಾಗಿ ಪವರ್ ಆಫ್ ಅಟಾರ್ನಿ (ಅಧಿಕಾರ ಪತ್ರ) ಹೊಂದಿದ್ದರು. ಪಾಟೀಲ್ ಅವರು ತಮ್ಮ ಕಂಪನಿಯ ಪರವಾಗಿ ದಾಖಲೆಗಳ ಮೇಲೆ ಸಹಿ ಹಾಕಿದ್ದಾರೆ. ಆ ಕಂಪನಿಯಲ್ಲಿ ಪಾರ್ಥ ಪವಾರ್ ಕೂಡ ಡೈರೆಕ್ಟರ್ (ನಿರ್ದೇಶಕ) ಆಗಿದ್ದಾರೆ.

ಸರ್ಕಾರವು ಸ್ವಾಧೀನಪಡಿಸಿಕೊಂಡು ಭಾರತೀಯ ಸಸ್ಯಶಾಸ್ತ್ರ ಸಮೀಕ್ಷೆಗೆ ಗುತ್ತಿಗೆಗೆ ಪಡೆದಿರುವ ಭೂಮಿಯನ್ನು ಈ ರೀತಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತನಿಖಾ ಸಮಿತಿಯ ನೇತೃತ್ವವನ್ನು ನೋಂದಣಿ ಜಂಟಿ ಮಹಾನಿರೀಕ್ಷಕ ರಾಜೇಂದ್ರ ಮುಥೆ ವಹಿಸಿದ್ದರು. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ ಸುಮಾರು 1,800 ಕೋಟಿ ರೂಪಾಯಿ ಬೆಲೆ ಬಾಳುವ 40 ಎಕರೆ ಸರ್ಕಾರಿ ಭೂಮಿಯನ್ನು ಒಳಗೊಂಡ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ “ಬಹು ಅಕ್ರಮಗಳು ಮತ್ತು ನಿಬಂಧನೆಗಳ ಉಲ್ಲಂಘನೆ” ನಡೆದಿರುವುದನ್ನು ಅದು ಎತ್ತಿ ತೋರಿಸಿದೆ.

ಸರ್ಕಾರಿ ಸ್ವಾಮ್ಯದ 43 ಎಕರೆ ಜಮೀನನ್ನು ಅಮೇಡಿಯಾ ಎಂಟರ್‌ಪ್ರೈಸಸ್ ಎಲ್‌ಎಲ್‌ಪಿಗೆ 300 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ. ಇದು ಜಮೀನಿನ ಅಂದಾಜು ಮಾರುಕಟ್ಟೆ ಮೌಲ್ಯ 1,800 ಕೋಟಿ ರೂ.ಗಳಿಗಿಂತ ಬಹಳ ಕಡಿಮೆಯಾಗಿದೆ.

300 ಕೋಟಿ ರೂಪಾಯಿಗಳ ಘೋಷಿತ ಒಪ್ಪಂದದ ಮೌಲ್ಯವು ಸುಮಾರು 21 ಕೋಟಿ ರೂಪಾಯಿಗಳ ಮುದ್ರಾಂಕ ಶುಲ್ಕ ಮತ್ತು ಸಂಬಂಧಿತ ತೆರಿಗೆಗಳನ್ನು ಒಳಗೊಳ್ಳಬೇಕಿತ್ತು. ಆದರೆ, ತನಿಖಾಧಿಕಾರಿಗಳು ಈ ಪತ್ರವನ್ನು 500 ರೂಪಾಯಿಗಳ ಟೋಕನ್ ಮುದ್ರಾಂಕ ಶುಲ್ಕ ಮತ್ತು 30,000 ರೂಪಾಯಿಗಳ ನೋಂದಣಿ ಶುಲ್ಕದೊಂದಿಗೆ ನೋಂದಾಯಿಸಲಾಗಿದೆ ಎಂದು ಕಂಡುಕೊಂಡಿದ್ದಾರೆ. ಇದರಿಂದಾಗಿ ರಾಜ್ಯ ಖಜಾನೆಗೆ ಭಾರಿ ನಷ್ಟವಾಗಿದೆ.

ಪಾರ್ಥ್ ಪವಾರ್ ಅವರನ್ನು ಅಮೇಡಿಯಾದಲ್ಲಿ ಪಾಲುದಾರ ಎಂದು ಪಟ್ಟಿ ಮಾಡಲಾಗಿದೆ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬರುವುದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಪರಿಣಾಮವಾಗಿ, ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

“ನಮಗೆ ಲಭ್ಯವಾದ ವರದಿಯ ಒಂದು ಭಾಗದ ಪ್ರಕಾರ, ಭೂಮಿ ವ್ಯವಹಾರಗಳಲ್ಲಿ ಸ್ಟಾಂಪ್ ಡ್ಯೂಟಿ ಮನ್ನಾ ಕೋರಿದ ಪ್ರಕರಣಗಳಲ್ಲಿ, ಸಂಬಂಧಿತ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಆ ವ್ಯವಹಾರಕ್ಕೆ ಸ್ಟಾಂಪ್ ಕಲೆಕ್ಟರ್ ಅನುಮೋದನೆ ನೀಡಿಯೇ ತೀರಬೇಕು. ಅಂದರೆ, ಸ್ಟಾಂಪ್ ಡ್ಯೂಟಿ ಮನ್ನಾ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ಭೂಮಿ ಖರೀದಿ-ಮಾರಾಟ/ದಾಖಲಾತಿ ಪ್ರಕರಣಗಳಲ್ಲಿ ಕಲೆಕ್ಟರ್ ಆಫ್ ಸ್ಟಾಂಪ್ಸ್ ಅವರ ಅನುಮತಿ ಕಡ್ಡಾಯವಾಗಿರುತ್ತದೆ. ಇಲ್ಲದಿದ್ದಲ್ಲಿ ಆ ವ್ಯವಹಾರ ಮಾನ್ಯವಾಗುವುದಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“ರಾಜ್ಯದಲ್ಲಿ ಆದಾಯ ಸಂಗ್ರಹಣೆಗೆ ಮುಖ್ಯವಾದ ಜಿಲ್ಲೆಗಳಲ್ಲಿ ಜಂಟಿ ಉಪ ನೋಂದಣಿದಾರರ ಹುದ್ದೆಗಳಿಗೆ ಅರ್ಹ ಹಿರಿಯ ಮತ್ತು ಅನುಭವಿ ಜಂಟಿ ಉಪ ನೋಂದಣಿದಾರರನ್ನು ನೇಮಿಸಬೇಕು ಮತ್ತು ಈ ಹುದ್ದೆಗಳು ಖಾಲಿಯಾಗಿ ಉಳಿಯದಂತೆ ನೋಡಿಕೊಳ್ಳಬೇಕು” ಎಂದು ವರದಿಯು ಶಿಫಾರಸು ಮಾಡಿದೆ. 1908ರ ನೋಂದಣಿ ಕಾಯ್ದೆಯ ಸೆಕ್ಷನ್ ಕೆ, ಭೂಮಿಯ 7/12 ಸಾರವು ಒಂದು ತಿಂಗಳಿಗಿಂತ ಹಳೆಯದಾಗಿರದಿದ್ದರೆ ಮಾತ್ರ ಅಂತಹ ದಾಖಲಾತಿಯನ್ನು ಪೂರ್ಣಗೊಳಿಸಬಹುದು ಎಂದು ಹೇಳುತ್ತದೆ” ಎಂದಿದೆ.

“ವರದಿಯು 1908ರ ನೋಂದಣಿ ಕಾಯ್ದೆಯಲ್ಲಿ ಮಾರ್ಪಾಡುಗಳನ್ನು ಶಿಫಾರಸು ಮಾಡಿದೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“28/04/2025ರ ತಿದ್ದುಪಡಿಯ ಪ್ರಕಾರ, 1908ರ ನೋಂದಣಿ ಕಾಯ್ದೆಯಲ್ಲಿ ಸೆಕ್ಷನ್ 18ಎ ಅನ್ನು ಸೇರಿಸಲಾಗಿದೆ. ಅದರ ಉಪವಿಭಾಗ (1) ರ ಷರತ್ತು (ಬಿ) ಪ್ರಕಾರ, ಸರ್ಕಾರ ಮತ್ತು ಅಂತಹುದೇ ಅಧಿಕಾರಿಗಳ ಒಡೆತನದ ಆಸ್ತಿಗಳ ಖರೀದಿ ಮತ್ತು ಮಾರಾಟ ಇತ್ಯಾದಿಗಳ ಪತ್ರಗಳನ್ನು ದ್ವಿತೀಯ ನೋಂದಣಿದಾರರು ನೋಂದಾಯಿಸದಿರುವುದು ಕಡ್ಡಾಯವಾಗಿದೆ” ಎಂದು ಅದು ಹೇಳಿದೆ” ಎಂದು ವಿವರಿಸಿದೆ.

“ಆದಾಗ್ಯೂ, ಈ ನಿಬಂಧನೆಯು ‘ಮಾಲೀಕತ್ವ’ಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರವು ಇನ್ನೂ ‘ಮಾಲೀಕತ್ವ’ ಹೊಂದಿಲ್ಲದ ಆದರೆ ಸರ್ಕಾರದ ಸ್ವಾಧೀನದಲ್ಲಿರುವ ಮತ್ತು/ಅಥವಾ ಇತರ ಹಿತಾಸಕ್ತಿಗಳನ್ನು ಹೊಂದಿರುವ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸದರಿ ಕಾಯಿದೆಯಲ್ಲಿ ಸ್ಪಷ್ಟವಾದ ನಿಬಂಧನೆಯನ್ನು ಮಾಡುವುದು ಅಗತ್ಯವೆಂದು ತೋರುತ್ತದೆ” ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...