Homeಮುಖಪುಟಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

ಪುಣೆ ಭೂ ಅವ್ಯವಹಾರ ಪ್ರಕರಣ : ಅಜಿತ್ ಪವಾರ್ ಮಗನ ಹೆಸರು ಕೈಬಿಟ್ಟ ತನಿಖಾ ಸಮಿತಿ

- Advertisement -
- Advertisement -

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎನ್ನಲಾದ ಪುಣೆಯ ಮುಂಡ್ವಾದಲ್ಲಿನ ವಿವಾದಾತ್ಮಕ ಭೂ ವ್ಯವಹಾರದ ತನಿಖೆ ನಡೆಸುತ್ತಿರುವ ಎರಡು ಸಮಿತಿಗಳಲ್ಲಿ ಮೊದಲನೆಯದು, ಮಂಗಳವಾರ (ನವೆಂಬರ್ 18) ಸಲ್ಲಿಸಿದ ವರದಿಯಲ್ಲಿ ಅಮೇಡಿಯಾ ಎಂಟರ್‌ಪ್ರೈಸಸ್‌ ಎಲ್‌ಎಲ್‌ಪಿಯ ದಿಗ್ವಿಜಯ್ ಪಾಟೀಲ್, ಶೀತಲ್ ತೇಜ್ವಾನಿ ಮತ್ತು ಸಬ್-ರಿಜಿಸ್ಟ್ರಾರ್ ರವೀಂದ್ರ ತರು ವಿರುದ್ಧ ದೋಷಾರೋಪಣೆ ಮಾಡಿದೆ ಎಂದು ವರದಿಯಾಗಿದೆ.

ಗಮನಾರ್ಹವಾಗಿ, ಈ ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯಂತೆ, ವರದಿಯಲ್ಲೂ ಅಜಿತ್ ಪವಾರ್ ಅವರ ಮಗ ಪಾರ್ಥ್ ಪವಾರ್ ಹೆಸರನ್ನು ಉಲ್ಲೇಖಿಸಲಾಗಿಲ್ಲ ಎಂದು ವರದಿ ಹೇಳಿದೆ.

ತೇಜ್ವಾನಿ ಅವರು ಮೂಲ 272 ಜನ ಮಹಾರ್ ವಾಟಂಡಾರ್‌ಗಳ (ಮಹಾರ್ ವತನ್ ಭೂಮಿಯ ಮೂಲ ಹಕ್ಕುದಾರರು) ಪರವಾಗಿ ಪವರ್ ಆಫ್ ಅಟಾರ್ನಿ (ಅಧಿಕಾರ ಪತ್ರ) ಹೊಂದಿದ್ದರು. ಪಾಟೀಲ್ ಅವರು ತಮ್ಮ ಕಂಪನಿಯ ಪರವಾಗಿ ದಾಖಲೆಗಳ ಮೇಲೆ ಸಹಿ ಹಾಕಿದ್ದಾರೆ. ಆ ಕಂಪನಿಯಲ್ಲಿ ಪಾರ್ಥ ಪವಾರ್ ಕೂಡ ಡೈರೆಕ್ಟರ್ (ನಿರ್ದೇಶಕ) ಆಗಿದ್ದಾರೆ.

ಸರ್ಕಾರವು ಸ್ವಾಧೀನಪಡಿಸಿಕೊಂಡು ಭಾರತೀಯ ಸಸ್ಯಶಾಸ್ತ್ರ ಸಮೀಕ್ಷೆಗೆ ಗುತ್ತಿಗೆಗೆ ಪಡೆದಿರುವ ಭೂಮಿಯನ್ನು ಈ ರೀತಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತನಿಖಾ ಸಮಿತಿಯ ನೇತೃತ್ವವನ್ನು ನೋಂದಣಿ ಜಂಟಿ ಮಹಾನಿರೀಕ್ಷಕ ರಾಜೇಂದ್ರ ಮುಥೆ ವಹಿಸಿದ್ದರು. ವರದಿಯಲ್ಲಿ ಪುಣೆಯ ದುಬಾರಿ ಪ್ರದೇಶವಾದ ಮುಂಡ್ವಾದಲ್ಲಿ ಸುಮಾರು 1,800 ಕೋಟಿ ರೂಪಾಯಿ ಬೆಲೆ ಬಾಳುವ 40 ಎಕರೆ ಸರ್ಕಾರಿ ಭೂಮಿಯನ್ನು ಒಳಗೊಂಡ ಮಾರಾಟ-ಖರೀದಿ ಒಪ್ಪಂದದ ನೋಂದಣಿಯಲ್ಲಿ “ಬಹು ಅಕ್ರಮಗಳು ಮತ್ತು ನಿಬಂಧನೆಗಳ ಉಲ್ಲಂಘನೆ” ನಡೆದಿರುವುದನ್ನು ಅದು ಎತ್ತಿ ತೋರಿಸಿದೆ.

ಸರ್ಕಾರಿ ಸ್ವಾಮ್ಯದ 43 ಎಕರೆ ಜಮೀನನ್ನು ಅಮೇಡಿಯಾ ಎಂಟರ್‌ಪ್ರೈಸಸ್ ಎಲ್‌ಎಲ್‌ಪಿಗೆ 300 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ. ಇದು ಜಮೀನಿನ ಅಂದಾಜು ಮಾರುಕಟ್ಟೆ ಮೌಲ್ಯ 1,800 ಕೋಟಿ ರೂ.ಗಳಿಗಿಂತ ಬಹಳ ಕಡಿಮೆಯಾಗಿದೆ.

300 ಕೋಟಿ ರೂಪಾಯಿಗಳ ಘೋಷಿತ ಒಪ್ಪಂದದ ಮೌಲ್ಯವು ಸುಮಾರು 21 ಕೋಟಿ ರೂಪಾಯಿಗಳ ಮುದ್ರಾಂಕ ಶುಲ್ಕ ಮತ್ತು ಸಂಬಂಧಿತ ತೆರಿಗೆಗಳನ್ನು ಒಳಗೊಳ್ಳಬೇಕಿತ್ತು. ಆದರೆ, ತನಿಖಾಧಿಕಾರಿಗಳು ಈ ಪತ್ರವನ್ನು 500 ರೂಪಾಯಿಗಳ ಟೋಕನ್ ಮುದ್ರಾಂಕ ಶುಲ್ಕ ಮತ್ತು 30,000 ರೂಪಾಯಿಗಳ ನೋಂದಣಿ ಶುಲ್ಕದೊಂದಿಗೆ ನೋಂದಾಯಿಸಲಾಗಿದೆ ಎಂದು ಕಂಡುಕೊಂಡಿದ್ದಾರೆ. ಇದರಿಂದಾಗಿ ರಾಜ್ಯ ಖಜಾನೆಗೆ ಭಾರಿ ನಷ್ಟವಾಗಿದೆ.

ಪಾರ್ಥ್ ಪವಾರ್ ಅವರನ್ನು ಅಮೇಡಿಯಾದಲ್ಲಿ ಪಾಲುದಾರ ಎಂದು ಪಟ್ಟಿ ಮಾಡಲಾಗಿದೆ. ಆದರೆ, ವ್ಯವಹಾರಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯಲ್ಲಿ ಅವರ ಹೆಸರು ಕಂಡುಬರುವುದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಪರಿಣಾಮವಾಗಿ, ಸಮಿತಿಯು ತನ್ನ ವರದಿಯಲ್ಲಿ ಅವರ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ ಎಂದು ಇಂಡಿಯಾ ಟುಡೇ ವರದಿ ಹೇಳಿದೆ.

“ನಮಗೆ ಲಭ್ಯವಾದ ವರದಿಯ ಒಂದು ಭಾಗದ ಪ್ರಕಾರ, ಭೂಮಿ ವ್ಯವಹಾರಗಳಲ್ಲಿ ಸ್ಟಾಂಪ್ ಡ್ಯೂಟಿ ಮನ್ನಾ ಕೋರಿದ ಪ್ರಕರಣಗಳಲ್ಲಿ, ಸಂಬಂಧಿತ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಆ ವ್ಯವಹಾರಕ್ಕೆ ಸ್ಟಾಂಪ್ ಕಲೆಕ್ಟರ್ ಅನುಮೋದನೆ ನೀಡಿಯೇ ತೀರಬೇಕು. ಅಂದರೆ, ಸ್ಟಾಂಪ್ ಡ್ಯೂಟಿ ಮನ್ನಾ ಪಡೆಯಲು ಅರ್ಜಿ ಸಲ್ಲಿಸಿದ ಎಲ್ಲಾ ಭೂಮಿ ಖರೀದಿ-ಮಾರಾಟ/ದಾಖಲಾತಿ ಪ್ರಕರಣಗಳಲ್ಲಿ ಕಲೆಕ್ಟರ್ ಆಫ್ ಸ್ಟಾಂಪ್ಸ್ ಅವರ ಅನುಮತಿ ಕಡ್ಡಾಯವಾಗಿರುತ್ತದೆ. ಇಲ್ಲದಿದ್ದಲ್ಲಿ ಆ ವ್ಯವಹಾರ ಮಾನ್ಯವಾಗುವುದಿಲ್ಲ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“ರಾಜ್ಯದಲ್ಲಿ ಆದಾಯ ಸಂಗ್ರಹಣೆಗೆ ಮುಖ್ಯವಾದ ಜಿಲ್ಲೆಗಳಲ್ಲಿ ಜಂಟಿ ಉಪ ನೋಂದಣಿದಾರರ ಹುದ್ದೆಗಳಿಗೆ ಅರ್ಹ ಹಿರಿಯ ಮತ್ತು ಅನುಭವಿ ಜಂಟಿ ಉಪ ನೋಂದಣಿದಾರರನ್ನು ನೇಮಿಸಬೇಕು ಮತ್ತು ಈ ಹುದ್ದೆಗಳು ಖಾಲಿಯಾಗಿ ಉಳಿಯದಂತೆ ನೋಡಿಕೊಳ್ಳಬೇಕು” ಎಂದು ವರದಿಯು ಶಿಫಾರಸು ಮಾಡಿದೆ. 1908ರ ನೋಂದಣಿ ಕಾಯ್ದೆಯ ಸೆಕ್ಷನ್ ಕೆ, ಭೂಮಿಯ 7/12 ಸಾರವು ಒಂದು ತಿಂಗಳಿಗಿಂತ ಹಳೆಯದಾಗಿರದಿದ್ದರೆ ಮಾತ್ರ ಅಂತಹ ದಾಖಲಾತಿಯನ್ನು ಪೂರ್ಣಗೊಳಿಸಬಹುದು ಎಂದು ಹೇಳುತ್ತದೆ” ಎಂದಿದೆ.

“ವರದಿಯು 1908ರ ನೋಂದಣಿ ಕಾಯ್ದೆಯಲ್ಲಿ ಮಾರ್ಪಾಡುಗಳನ್ನು ಶಿಫಾರಸು ಮಾಡಿದೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

“28/04/2025ರ ತಿದ್ದುಪಡಿಯ ಪ್ರಕಾರ, 1908ರ ನೋಂದಣಿ ಕಾಯ್ದೆಯಲ್ಲಿ ಸೆಕ್ಷನ್ 18ಎ ಅನ್ನು ಸೇರಿಸಲಾಗಿದೆ. ಅದರ ಉಪವಿಭಾಗ (1) ರ ಷರತ್ತು (ಬಿ) ಪ್ರಕಾರ, ಸರ್ಕಾರ ಮತ್ತು ಅಂತಹುದೇ ಅಧಿಕಾರಿಗಳ ಒಡೆತನದ ಆಸ್ತಿಗಳ ಖರೀದಿ ಮತ್ತು ಮಾರಾಟ ಇತ್ಯಾದಿಗಳ ಪತ್ರಗಳನ್ನು ದ್ವಿತೀಯ ನೋಂದಣಿದಾರರು ನೋಂದಾಯಿಸದಿರುವುದು ಕಡ್ಡಾಯವಾಗಿದೆ” ಎಂದು ಅದು ಹೇಳಿದೆ” ಎಂದು ವಿವರಿಸಿದೆ.

“ಆದಾಗ್ಯೂ, ಈ ನಿಬಂಧನೆಯು ‘ಮಾಲೀಕತ್ವ’ಕ್ಕೆ ಮಾತ್ರ ಸೀಮಿತವಾಗಿದೆ. ಸರ್ಕಾರವು ಇನ್ನೂ ‘ಮಾಲೀಕತ್ವ’ ಹೊಂದಿಲ್ಲದ ಆದರೆ ಸರ್ಕಾರದ ಸ್ವಾಧೀನದಲ್ಲಿರುವ ಮತ್ತು/ಅಥವಾ ಇತರ ಹಿತಾಸಕ್ತಿಗಳನ್ನು ಹೊಂದಿರುವ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸದರಿ ಕಾಯಿದೆಯಲ್ಲಿ ಸ್ಪಷ್ಟವಾದ ನಿಬಂಧನೆಯನ್ನು ಮಾಡುವುದು ಅಗತ್ಯವೆಂದು ತೋರುತ್ತದೆ” ಎಂದಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....