Homeಮುಖಪುಟಪುಣೆ ಭೂ ಹಗರಣ: ಅಜಿತ್ ಪವಾರ್ ಪುತ್ರ ಪಾರ್ಥ್ ಸಂಸ್ಥೆಗೆ ನೋಟಿಸ್; ದಂಡ ಪಾವತಿಸುವಂತೆ ಕಂದಾಯ...

ಪುಣೆ ಭೂ ಹಗರಣ: ಅಜಿತ್ ಪವಾರ್ ಪುತ್ರ ಪಾರ್ಥ್ ಸಂಸ್ಥೆಗೆ ನೋಟಿಸ್; ದಂಡ ಪಾವತಿಸುವಂತೆ ಕಂದಾಯ ಇಲಾಖೆ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎಂದು ಹೇಳಲಾದ ಪುಣೆ ಭೂ ಹಗರಣದಲ್ಲಿ ಹೊಸ ಬೆಳವಣಿಗೆ ಬೆಳಕಿಗೆ ಬಂದಿದೆ. ಪಾರ್ಥ್‌ಗೆ ಸಂಬಂಧಿಸಿದ ಅಮೀಡಿಯಾ ಎಲ್‌ಎಲ್‌ಪಿ ಕಂಪನಿಗೆ ರಾಜ್ಯ ಸ್ಟ್ಯಾಂಪ್ ಡ್ಯೂಟಿ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಸುಮಾರು 43 ಕೋಟಿ ರೂ. ಬಾಕಿ ಮತ್ತು ದಂಡ ಪಾವತಿಸುವಂತೆ ಒತ್ತಾಯಿಸಿದೆ.

ಈ ವಿವಾದ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ್ದು, ತನಿಖೆಯಲ್ಲಿ ಸಂಪೂರ್ಣ ಸಹಕಾರ ಮತ್ತು ಪಾರದರ್ಶಕತೆ ಕಾಪಾಡಿಕೊಳ್ಳಲಾಗುವುದು ಎಂದು ಅಜಿತ್ ಪವಾರ್ ಸಾರ್ವಜನಿಕವಾಗಿ ಭರವಸೆ ನೀಡಿದ್ದಾರೆ.

ಆಪಾದಿತ ಭೂ ಹಗರಣ

ಪುಣೆಯ ಕೋರೆಗಾಂವ್ ಪಾರ್ಕ್‌ನಲ್ಲಿರುವ ಸುಮಾರು ₹1,800 ಕೋಟಿ ಮೌಲ್ಯದ 40 ಎಕರೆ ಸರ್ಕಾರಿ ಸ್ವಾಮ್ಯದ ಜಮೀನನ್ನು ಕೇವಲ ₹300 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ವರದಿಗಳು ಬಂದ ನಂತರ ಕಂಪನಿಯ ಹೆಸರು ಹೊರಬಿದ್ದಿದೆ. ₹21 ಕೋಟಿ ಸ್ಟ್ಯಾಂಪ್ ಡ್ಯೂಟಿಯನ್ನು ಕೇವಲ ₹500 ಕ್ಕೆ ದಾಖಲಿಸಲಾಗಿದೆ ಎಂದು ಆರೋಪಿಸಲಾಯಿತು. ಇದು ಕಂಪನಿ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳ ನಡುವಿನ ವಂಚನೆ ಹಾಗೂ ಒಪ್ಪಂದದ ಅನುಮಾನಗಳನ್ನು ಹುಟ್ಟುಹಾಕಿತು.

ಪಾರದರ್ಶಕ ತನಿಖೆಗೆ ಒತ್ತಾಯಿಸಿದ ಅಜಿತ್ ಪವಾರ್ 

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದು, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ವಿನಂತಿಸಿದ್ದೇನೆ ಎಂದು ಹೇಳಿದ್ದಾರೆ.

“ಈ ಪ್ರಕರಣವು ನನ್ನ ಕುಟುಂಬಕ್ಕೆ ಸಂಬಂಧಿಸಿದೆಯಾದರೂ, ನಿಯಮಗಳ ಪ್ರಕಾರ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ನಾನು ಮುಖ್ಯಮಂತ್ರಿಗೆ ಹೇಳಿದ್ದೇನೆ. ಈ ವಿಷಯದಲ್ಲಿ ನಾವು ಸಂಪೂರ್ಣವಾಗಿ ಸಹಕರಿಸುತ್ತೇವೆ. ಆರೋಪಗಳನ್ನು ಮಾಡುವುದು ಸುಲಭ, ಆದರೆ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು” ಎಂದು ಪವಾರ್ ಹೇಳಿದರು.

ಒಪ್ಪಂದದಲ್ಲಿ ಯಾವುದೇ ಹಣಕಾಸಿನ ವಹಿವಾಟು ನಡೆದಿಲ್ಲ ಎಂದು ಪ್ರಾಥಮಿಕ ಸಂಶೋಧನೆಗಳು ಬಹಿರಂಗಪಡಿಸಿವೆ ಎಂದು ಅವರು ಸ್ಪಷ್ಟಪಡಿಸಿದರು. “ಎಲ್ಲ ಸಂಬಂಧಿತ ದಾಖಲೆಗಳನ್ನು ರದ್ದುಗೊಳಿಸಲಾಯಿತು, ವಹಿವಾಟುಗಳನ್ನು ರದ್ದುಗೊಳಿಸಲಾಯಿತು” ಎಂದು ಹೇಳಿದರು.

ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಫಡ್ನವೀಸ್ 

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಕರಣವನ್ನು ‘ಪ್ರಾಥಮಿಕವಾಗಿ ಗಂಭೀರ’ ಎಂದು ಹೆಳಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಕಾಸ್ ಖರ್ಗೆ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಕಂದಾಯ ಇಲಾಖೆ ಮತ್ತು ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ಈಗ ಸಂಭಾವ್ಯ ಕಾರ್ಯವಿಧಾನದ ಉಲ್ಲಂಘನೆಗಳು ಮತ್ತು ಒಪ್ಪಂದದ ಬಗ್ಗೆ ತನಿಖೆ ನಡೆಸುತ್ತಿದೆ.

ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಅವರ ಮಧ್ಯಂತರ ವರದಿಯ ನಂತರ, ತಹಶೀಲ್ದಾರ್ ಸೂರ್ಯಕಾಂತ್ ಯೆವಾಲೆ ಮತ್ತು ಸಬ್-ರಿಜಿಸ್ಟ್ರಾರ್ ರವೀಂದ್ರ ತರು ಎಂಬ ಇಬ್ಬರು ಅಧಿಕಾರಿಗಳನ್ನು ಅವರ ಭಾಗಿಯಾಗಿರುವ ಆರೋಪದ ಮೇಲೆ ಅಮಾನತುಗೊಳಿಸಲಾಯಿತು. ನಂತರ ಪೊಲೀಸರು ತರು ಅವರ ಕಚೇರಿಯ ಮೇಲೆ ದಾಳಿ ನಡೆಸಿ, ಲ್ಯಾಪ್‌ಟಾಪ್‌ಗಳು, ಫೈಲ್‌ಗಳು ಮತ್ತು ದಾಖಲೆಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡರು.

ವಿರೋಧ ಪಕ್ಷಗಳಿಂದ ಆಕ್ರೋಶ

ಮಹಾಯುತಿ ಸರ್ಕಾರವು ಪಾರ್ಥ್ ಪವಾರ್ ಅವರನ್ನು ರಕ್ಷಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅಜಿತ್ ಪವಾರ್ ಅವರ ರಾಜೀನಾಮೆ ಮತ್ತು ಅವರ ಮಗನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದರು. ಸಾಮಾಜಿಕ ಕಾರ್ಯಕರ್ತೆ ಅಂಜಲಿ ದಮಾನಿಯಾ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ನ್ಯಾಯಾಂಗ ತನಿಖೆಗೆ ಕರೆ ನೀಡಿದರು.

ವಿವಾದಿತ ಭೂಮಿ ಮೂಲತಃ ಭಾರತೀಯ ಸಸ್ಯಶಾಸ್ತ್ರೀಯ ಸಮೀಕ್ಷೆಗೆ ಗುತ್ತಿಗೆ ನೀಡಲಾದ ಮತ್ತು ಸರ್ಕಾರಿ ನಿಯಂತ್ರಣದಲ್ಲಿರುವ ಮಹಾರ್ ವತನ್ ಆಸ್ತಿಯಾಗಿತ್ತು. ಸರ್ಕಾರಿ ಅನುಮೋದನೆಯಿಲ್ಲದೆ ಖಾಸಗಿ ಕಂಪನಿಗೆ ಮಾರಾಟ ಮಾಡುವುದು ಅನಿಯಮಿತ ಮತ್ತು ಸಂಭಾವ್ಯವಾಗಿ ಕಾನೂನುಬಾಹಿರ ಎಂದು ಕಾನೂನು ತಜ್ಞರು ಹೇಳುತ್ತಾರೆ.

‘ಜಾತಿ ಬೇಲಿಯಿಂದ ಧಾರ್ಮಿಕ ನಂಬಿಕೆ ತಡೆಯಲು ಸಾಧ್ಯವಿಲ್ಲ..’; ದಲಿತ ಕಾಲೊನಿಯ ಮೂಲಕ ದೇವರ ರಥ ಸಂಚಾರಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...