Homeಮುಖಪುಟಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

- Advertisement -
- Advertisement -

ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಕುಡಿದ ಅಮಲಿನಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಗುದ್ದಿ, ಅವರ ಸಾವಿಗೆ ಕಾರಣನಾದ 17 ವರ್ಷದ ಅಪ್ರಾಪ್ತರ ಕುಟುಂಬವೂ ಕುಡಿದ ಅಮಲಿನಲ್ಲಿ ಆಸ್ಪತ್ರೆಗೆ ಬಂದಿತ್ತು ಎಂದು ತಿಳಿದುಬಂದಿದೆ. ತಮ್ಮ ಮಗನನ್ನು ಉಳಿಸಲು ಕುಟುಂಬವು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಪಿತೂರಿ ನಡೆಸಲು ಪ್ರಯತ್ನಿಸಿದೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎನ್‌ಡಿಟಿವಿ’ ವರದಿ ಮಾಡಿದೆ.

ಆರೋಪಿಯ ತಂದೆ, ತಾಯಿ ಮತ್ತು ಸಹೋದರ ಅವರು ಸಾಸೂನ್ ಆಸ್ಪತ್ರೆಗೆ ಬಂದಾಗ ಪಾನಮತ್ತರಾಗಿದ್ದರು. ಅಪ್ರಾಪ್ತ ಬಾಲಕನ ರಕ್ತದ ಮಾದರಿಗಳನ್ನು ಬದಲಾಯಿಸಲು ವೈದ್ಯರಿಗೆ ಲಂಚ ನೀಡಿ, ಆತನನ್ನು ಈ ಪ್ರಕರಣದಿಂದ ಉಳಿಸುವಂತೆ ಆದೇಶವನ್ನು ನೀಡಿದ್ದರು. ಇದು ಅಪ್ರಾಪ್ತರ ರಕ್ತದಲ್ಲಿನ ಆಲ್ಕೋಹಾಲ್ ಮಟ್ಟವನ್ನು ಸುಳ್ಳು ಮಾಡುವ ಪ್ರಯತ್ನವಾಗಿತ್ತು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕನ ರಕ್ತದ ಮಾದರಿಗಳನ್ನು ಅವನ ತಂದೆ ಅಥವಾ ಸಹೋದರನೊಂದಿಗೆ ವಿನಿಮಯ ಮಾಡಿಕೊಳ್ಳುವುದು ಮೂಲ ಯೋಜನೆಯಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ, ಅವರಿಬ್ಬರೂ ತುಂಬಾ ಕುಡಿದಿದ್ದರಿಂದ, ಅವರ ತಾಯಿಯಿಂದ ರಕ್ತದ ಮಾದರಿಯನ್ನು ತೆಗೆದುಕೊಳ್ಳಲಾಗಿದೆ, ನಂತರ ಅವರನ್ನು ಪ್ರಕರಣದಲ್ಲಿ ಬಂಧಿಸಲಾಯಿತು.

ಪ್ರಕರಣದ ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಡುಗ ತುಂಬಾ ಕುಡಿದು ನಡೆದಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಆದರೆ, ಪ್ರಾಥಮಿಕ ಪರೀಕ್ಷೆಯ ಸಮಯದಲ್ಲಿ ರಕ್ತ ಪರೀಕ್ಷೆಯ ವರದಿಗಳು ಅವನ ರಕ್ತದಲ್ಲಿ ಆಲ್ಕೋಹಾಲ್ ಇರಲಿಲ್ಲ ಎಂದು ಹೇಳಿವೆ. ರಕ್ತದ ಮಾದರಿಗಳನ್ನು ವಿನಿಮಯ ಮಾಡಿಕೊಂಡಿದ್ದಕ್ಕಾಗಿ ಸಸೂನ್ ಆಸ್ಪತ್ರೆಯ ಇಬ್ಬರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಮತ್ತು ಇಬ್ಬರು ಮಧ್ಯವರ್ತಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಘಟನೆಯ ಸಮಯದಲ್ಲಿ ಕಾರಿನಲ್ಲಿದ್ದ ಇತರ ಇಬ್ಬರು ಅಪ್ರಾಪ್ತರ ರಕ್ತದ ಮಾದರಿಗಳನ್ನು ಬದಲಾಯಿಸಲು ಪ್ರಯತ್ನಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮೂರು ಗಂಡು ಮಕ್ಕಳಿಗೆ ತಾಯಿಯ ರಕ್ತವನ್ನು ಬಳಸುವುದು ಮೂಲ ಯೋಜನೆಯಾಗಿತ್ತು. ಆದರೆ, ರಕ್ತದ ಗುಂಪು ಹೊಂದಿಕೆಯಾಗದ ಕಾರಣ ತೊಡಕಾಗಿತ್ತು ಎಂದು ವರದಿ ಮಾಡಲಾಗಿದೆ.

ಪುಣೆ ಪೊಲೀಸರು ಗುರುವಾರ ಪೋರ್ಷೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ 17 ವರ್ಷದ ಬಾಲಾಪರಾಧಿ ವಿರುದ್ಧ ಸಾಕ್ಷ್ಯ ನಾಶ ಮತ್ತು ನಕಲಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಪರಾಧಗಳನ್ನು ಸೇರಿಸಿದ್ದಾರೆ. ಹೊಸ ಆರೋಪಗಳನ್ನು ಒಳಗೊಂಡ “ಪೂರಕ ಅಂತಿಮ ವರದಿ” ಯನ್ನು ಇಲ್ಲಿನ ಬಾಲ ನ್ಯಾಯ ಮಂಡಳಿ (ಜೆಜೆಬಿ) ಮುಂದೆ ಸಲ್ಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ಕಾರಿನ ವೇಗದ ಬಗ್ಗೆ ತಾಂತ್ರಿಕ ದತ್ತಾಂಶವನ್ನು ಹೊಸದಾಗಿ ಸೇರಿಸಲಾದ ವಿಭಾಗಗಳನ್ನು ದೃಢೀಕರಿಸಲು ಸಾಕ್ಷಿಗಳ ಹೇಳಿಕೆಗಳ ಜೊತೆಗೆ ವರದಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ; ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...