Homeಕರ್ನಾಟಕಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವುರ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಈ ಕೃತ್ಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದರು. ಸ್ಥಳಕ್ಕೆ ಸಂಸದ ಡಿ.ಕೆ ಸುರೇಶ್ ಜೊತೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಪುನೀತ್ ಕೆರೆಹಳ್ಳಿ ಕೃತ್ಯದ ವಿರುದ್ದ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಂಜುನಾಥ್‌ರವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಹಲಸೂರು ಗೇಟ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರ ಮೇಲೆ ಐಪಿಸಿ 153ಎ (ಕೋಮು ಸೌಹಾರ್ದತೆಗೆ ಧಕ್ಕೆ), ಐಪಿಸಿ 295ಎ (ಉದ್ದೇಶಪೂರ್ವಕವಾಗಿ ಕೋಮು ಗಲಭೆಗೆ ಪ್ರಚೋದನೆ) ನೀಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಲಪಂಥೀಯರೊಂದಿಗೆ ಗುರುತಿಸಿಕೊಂಡಿರುವ ಪುನೀತ್ ಕೆರೆಹಳ್ಳಿ ಈ ಹಿಂದೆಯೂ ಕೋಮು ಗಲಭೆಗೆ ಪ್ರಚೋದನೆ ನೀಡುವ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಬೆಂಗಳೂರಿನ ಬೇಗೂರು ಕೆರೆಯ ಬಳಿ ವಿಡಿಯೋ ಮಾಡಿದ್ದರು. ಅಲ್ಲದೆ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ದಾಂಧಲೆ, ಶ್ರೀರಂಗಪಟ್ಟಣದ ಜಾಮೀಯ ಮಸೀದಿ ಬಳಿ ದಾಂಧಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಇದನ್ನೂ ಓದಿ; ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೆರೆ ಹಾವಿಗೆ ಜೀವಾವದಿ ಶಿಕ್ಷೆ ಕೊಟ್ರೆ ನಮ್ಮ ಕರುನಾಡು ಸ್ವಲ್ಪ ಶಾಂತಿಯುತವಾಗಿರುತ್ತೆ ಅಂತ ನನ್ನ ಅಭಿಪ್ರಾಯ 👍👍

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...