Homeಮುಖಪುಟಪುನೀತ್ ರಾಜ್‌ಕುಮಾರ್‌ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿದ್ದೇವೆ: ಡಾ.ರಂಗನಾಥ್

ಪುನೀತ್ ರಾಜ್‌ಕುಮಾರ್‌ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿದ್ದೇವೆ: ಡಾ.ರಂಗನಾಥ್

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ. ನಾವು ಶಕ್ತಿ ಮೀರಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವಿಕ್ರಂ ಆಸ್ಪತ್ರೆಯ ಹೃದಯ ತಜ್ಞರಾದ ಡಾ.ರಂಗನಾಥ್ ತಿಳಿಸಿದ್ದಾರೆ.

ಒಮ್ಮೆ ಹೃದಯಾಘಾತ ಸಂಭವಿಸಿದ ನಂತರ ಆಸ್ಪತ್ರೆಗೆ ಕರೆತರುವಾಗ ಮತ್ತೊಮ್ಮೆ ಸಂಭವಿಸಿದೆ. ಆದರೂ ನಾವು ಹೃದಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಮುಂದುವರೆಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಸೇರಿದಂತೆ ಹಲವು ಗಣ್ಯರು, ಚಿತ್ರನಟರು, ಅಭಿಮಾನಿಗಳು ಆಸ್ಪತ್ರೆಯ ಸುತ್ತ ನೆರೆದಿದ್ದಾರೆ. ಆಸ್ಪತ್ರೆಯ ಬಳಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು ಸುತ್ತಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊನ್ನೆ ತಾನೇ ಭಜರಂಗಿ – 2 ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ಮತ್ತು ಯಶ್ ಜೊತೆಗೂಡಿ ಡ್ಯಾನ್ಸ್ ಮಾಡಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದ್ದರು. ಈಗ ಪುನೀತ್ ಆಸ್ಪತ್ರೆ ಸೇರಿದ್ದರಿಂದ ಇಂದು ಬೆಳಿಗ್ಗೆಯಿಂದ ಬಿಡುಗಡೆಯಾಗಿದ್ದ ಶಿವರಾಜ್ ಕುಮಾರ್ ಅಭಿಯನದ ಭಜರಂಗಿ – 2 ಚಿತ್ರದ ಪ್ರದರ್ಶನವನ್ನು ರಾಜ್ಯಾದ್ಯಂತ ರದ್ದುಗೊಳಿಸಲಾಗಿದೆ.

“ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದು ಪುನೀತ್ ರಾಜ್ ಕುಮಾರ್ ನವೆಂಬರ್ 01 ರಂದು ಹೊಸ ಚಿತ್ರ ಘೋಷಿಸುವುದಾಗಿ ಫೇಸ್‌ಬುಕ್‌ನಲ್ಲಿ ತಿಳಿಸಿದ್ದರು. ಈಗ ಆಸ್ಪತ್ರೆ ಸೇರಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.


ಇದನ್ನೂ ಓದಿ: ನಟ ಪುನೀತ್ ರಾಜ್‌ಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಕ್ರಂ ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...