Homeಕರ್ನಾಟಕಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

- Advertisement -
- Advertisement -

ಮೇರು ನಟ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನಡೆಸುವುದಾಗಿ ಸರ್ಕಾರ ತಿಳಿಸಿದೆ.

ಮುಂಜಾಗ್ರತೆ ಕ್ರಮವಾಗಿ ನಗರದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಶಾಲೆ-ಕಾಲೇಜುಗಳ ಆಡಳಿತ ಮಂಡಳಿಗಳು ಮನೆಗೆ ಕಳುಹಿಸುತ್ತಿವೆ. ರಾಜಧಾನಿಯಲ್ಲಿರುವ ಸಿನಿಮಾ ಮಂದಿಗಳನ್ನೂ ಮುಚ್ಚಲಾಗಿದೆ. ಬೆಂಗಳೂರು ನಗರದಲ್ಲಿರುವ ಖಾಸಗಿ ಕಂಪನಿಗಳೂ ತಮ್ಮ ಸಿಬ್ಬಂದಿಗಳನ್ನು ಮನೆಗೆ ಕಳುಹಿಸುತ್ತಿದ್ದಾರೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರಿಗೆ ಸರಕಾರ ಸೂಚನೆ ನೀಡಿದೆ.

ಡಾ.ರಾಜ್‌ಕುಮಾರ್‌‌ ಸಮಾಧಿ ಸಮೀಪ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ. ಡಾ.ರಾಜ್‌ಕುಮಾರ್‌ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯ ಸಂಸ್ಕಾರವನ್ನು ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಲಭ್ಯವಿರುವ ಎಲ್ಲಾ ಸಿಬ್ಬಂದಿಗಳನ್ನು ಬಳಸಿಕೊಂಡು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಏರ್ಪಾಡು ಮಾಡಿಕೊಳ್ಳಲು  ಬೆಂಗಳೂರು ಪೊಲೀಸ್‌ ಅಧೀಕ್ಷಕರು ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶುಕ್ರವಾರ ಸಂಜೆ 5 ಗಂಟೆಯಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನಕ್ಕಾಗಿ ಸರ್ಕಾರ ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ಜನತೆಯಲ್ಲಿ ನನ್ನ ಮನವಿ ಏನೆಂದರೆ, ಇಂತಹ ಮಹಾನ್ ನಟನನ್ನು ಕಳೆದುಕೊಂಡಾಗ ನೋವಾಗುವುದು ಸಹಜ, ಆದರೆ ಭಾವೋದ್ವೇಗಕ್ಕೆ ಒಳಗಾಗಬಾರದು ಮತ್ತು ತಾಳ್ಮೆ ಕಳೆದುಕೊಳ್ಳಬಾರದು. ಶಾಂತಿ ಕಾಪಾಡಬೇಕು. ಅವರನ್ನು (ಪುನೀತ್) ಶಾಂತಿಯುತವಾಗಿ ಕಳುಹಿಸಬೇಕು. ನಾವು ಅವರಿಗೆ ಸರಿಯಾದ ಗೌರವವನ್ನು ನೀಡಬೇಕು’ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ‘ಶನಿವಾರ ದಿನ ವಿಡೀ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಿದ್ದೇವೆ. ಆದ್ದರಿಂದ ಜನರು ಶಾಂತಿಯುತವಾಗಿ ಅಂತಿಮ ನಮನ ಸಲ್ಲಿಸಬೇಕು. ಅಭಿಮಾನಿಗಳು ಶಾಂತಿ ಕಾಪಾಡುವಂತೆ ಕೈ ಜೋಡಿಸಿ ವಿನಂತಿಸುತ್ತೇನೆ” ಎಂದಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಎಲ್ಲಾ ಲಿಕ್ಕರ್ ಶಾಪ್‌ಗಳನ್ನು ಮುಚ್ಚಲು ಸರಕಾರ ಆದೇಶ ನೀಡಿದೆ.

ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆವರೆಗೆ ಬಾರ್‌ಗಳನ್ನು ಬಂದ್ ಮಾಡುವಂತೆ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಾರ್ ಆಂಡ್‌ ರೆಸ್ಟೋರೆಂಟ್‌ಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.

ಸ್ವಯಂ ಪ್ರೇರಿತ ಬಂದ್‌ಗೆ ಕರೆ: ಕನ್ನಡಪರ ಸಂಘಟನೆಯ ಮುಖಂಡರು ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡುತ್ತಿದ್ದಾರೆ. ಆದರೆ ಇದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಏನಾದರೂ ಬಂದ್ ಆಚರಿಸಿದರೆ ದೂರದ ಜಿಲ್ಲೆಗಳಿಂದ ಪುನೀತ್‌ ಅವರ ಕೊನೆಯ ದರ್ಶನಕ್ಕೆ ಬರುವವರಿಗೆ ತೊಂದರೆಯಾಗಲಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ರಾಜಾಜಿನಗರ, ವಿಜಯನಗರ ಸುತ್ತ ಮುತ್ತ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಕ್ಲೋಸ್ ಮಾಡಿಸಿರುವ ವರದಿಗಳಾಗಿವೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾಗ್ರಾಮ ಮತ್ತು ಕಂಠೀರವ ಸ್ಟುಡಿಯೊ ಕಲೆಗೆ ಮೀಸಲಾಗಲಿ ಅಲ್ಲಿ ಸಮಾಧಿ ಬೇಡ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...