Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...