Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...