Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...