Homeಕರ್ನಾಟಕಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

- Advertisement -
- Advertisement -

ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್‌‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್‌ಆಪ್‌ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದೆ. ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅತಿ ಹೆಚ್ಚು ಫಿಟ್‌ನೆಸ್‌ನಿಂದಾಗಿ ಪುನೀತ್‌‌ ಸಾವನ್ನಪ್ಪಿದ್ದಾರೆ” ಎಂಬ ವಿಚಾರವನ್ನು ಈ ಮೆಸೇಜ್‌ ಒಳಗೊಂಡಿದೆ. ಇದರ ಕುರಿತು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಯು ದೇವಿ ಶೆಟ್ಟಿ ಅವರಲ್ಲಿ ವಿಚಾರಿಸಿದ್ದು, “ಈ ರೀತಿಯ ಯಾವುದೇ ಸಂದೇಶವನ್ನು ನಾನು ನೀಡಿಲ್ಲ. ಜನರನ್ನು ದಿಕ್ಕು ತಪ್ಪಿಸಲು ನನ್ನ ಹೆಸರು ಬಳಸಿಕೊಳ್ಳಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ ಆಪ್‌ ಮೆಸೇಜ್‌ ಹೀಗಿದೆ:

ಡಾ.ದೇವಿ ಶೆಟ್ಟಿ

ನನ್ನೆಲ್ಲ ಸ್ನೇಹಿತರಿಗೆ….

ಕೆಲವು ವರ್ಷಗಳಿಂದ ನನಗೆ ವೈಯಕ್ತಿಕವಾಗಿ ಪರಿಚಯವಿದ್ದ 8ರಿಂದ 9 ಮಂದಿ ಅಗಲಿದ್ದಾರೆ, ಅದರಲ್ಲಿ ನಲವತ್ತು ವರ್ಷ ವಯಸ್ಸಿಗೆ ಸಾವನ್ನಪ್ಪಿದ, ಅತಿಯಾದ ಫಿಟ್‌ನೆಟ್‌‌ ಮಾಡುತ್ತಿದ್ದ ಕೆಲವು ಸೆಲಬ್ರಟಿಗಳೂ ಇದ್ದಾರೆ. ಫಿಟ್‌ನೆಸ್‌, ಸಿಕ್ಸ್‌ಫ್ಯಾಕ್ಸ್‌‌ ಇತ್ಯಾದಿಗಳ ಕಡೆಗೆ ಅವರು ನೋಡುತ್ತಿದ್ದರು. ಈ ಪಟ್ಟಿಗೆ ಈಗ ಪುನೀತ್‌ ರಾಜ್‌ಕುಮಾರ್‌ ಸೇರಿದ್ದಾರೆ.

ಜೀವನದಲ್ಲಿ ಯಾವುದೇ ವಿಷಯದಲ್ಲಾದರೂ ಅತಿಯಾದದ್ದನ್ನು ತಪ್ಪಿಸುವುದು ಮಂತ್ರವಾಗಬೇಕು. ಶೂನ್ಯವಾಗಿರಬೇಕು ಅಥವಾ ನೂರನ್ನು ತಲುಪಬೇಕು ಎಂಬ ರೀತಿಯ ಅತಿಯಾದ ಅಲೋಚನೆ ಸರಿಯಾದದ್ದಲ್ಲ. ಇಪ್ಪತ್ತು ನಿಮಿಷಗಳ ಮಧ್ಯಮ ಪ್ರಮಾಣದ ವ್ಯಾಯಾಮ ಮಾಡಿರಿ, ನಿಮ್ಮ ಪೂರ್ವಜರು ತಿನ್ನುತ್ತಿದ್ದುದನ್ನು ಮಾತ್ರ ತಿನ್ನಿರಿ, ನಿಮ್ಮ ಊರಿನಲ್ಲಿರುವ ಸ್ಥಳೀಯ ಮತ್ತು ಕಾಲಕ್ಕೆ ಅನುಗುಣವಾದ ಆಹಾರವನ್ನು ಸೇವಿಸಿ, ಪೂರ್ಣ 7 ಗಂಟೆಗಳ ನಿದ್ದೆ ಮಾಡಿರಿ, ನಿಮ್ಮ ದೇಹಕ್ಕೆ ಸ್ಟೀರಾಯ್ಡ್ಗಳನ್ನು ನೀಡದೆ ಗೌರವಿಸಿರಿ…. ಇತ್ಯಾದಿಗಳನ್ನು ನೀವು ಮಾಡಬೇಕಾಗಿದೆ.

ನೀವು ಬೆಳೆದಿದ್ದನ್ನು ಸಣ್ಣ ಪ್ರಮಾಣದಲ್ಲಿ ತಿನ್ನಿ, 20 ನಿಮಿಷದಿಂದ 30 ನಿಮಿಷಗಳವರೆಗೆ ವ್ಯಾಯಾಮ ಮಾಡಿ… ಒಳ್ಳೆಯ ನಡಿಗೆ ಮಾಡಿ. ನೀವು ಕುಡಿಯುತ್ತಿದ್ದರೆ, ವಾರಕ್ಕೆ ಒಂದೆರಡು ಪೆಗ್‌ಗಳಿಗೆ ಮಿತಿಗೊಳಿಸಿ. ‘ಕೆಲವು ದಿನ ಧೂಮಪಾನವನ್ನು ಬಿಡಬೇಡಿ’. ಯಾವುದಾದರೂ ಇರಲಿ, ಮಿತವಾಗಿರಲಿ. ನಿಮ್ಮ ದಿನಚರಿಯಲ್ಲಿ ಸ್ವಲ್ಪ ಮೌನ, ಧ್ಯಾನವನ್ನು ಸೇರಿಸಿ. ಅತ್ಯಂತ ಮುಖ್ಯವಾಗಿ, ನಿಮ್ಮ ದೇಹವನ್ನು ಆಲಿಸಿ. ಅದನ್ನು ಅರ್ಥಮಾಡಿಕೊಳ್ಳಿ.

40ರ ಹೊತ್ತಿಗೆ ದೇಹವು ಬಹಳಷ್ಟು ಬದಲಾವಣೆಗಳಿಗೆ ಒಳಗಾಗುತ್ತಿದೆ, 50 ವರ್ಷಗಳಿಗೆ ಇನ್ನೂ ಹೆಚ್ಚು, 60 ನಂತರ ನಿಮ್ಮ ದೇಹವು ನಿಧಾನಗೊಳ್ಳಲು ಪ್ರಾರಂಭಿಸುತ್ತದೆ, 70ರ ಮೇಲೆ, ನಿಮ್ಮ ದೇಹವು ಸ್ಥಗಿತಗೊಳ್ಳಲು ಪ್ರಾರಂಭಿಸುತ್ತದೆ, 80ರ ಮೇಲೆ ಪ್ರತಿ ವರ್ಷ ಬೋನಸ್ ಆಗಿದೆ…. ನೀವು 40 ಅಥವಾ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ, ನೀವು ಆರೋಗ್ಯವಂತರಾಗಿದ್ದರೆ ಕೃತಜ್ಞರಾಗಿರಿ…

ಹೀಗೆಹಲವು ಸಂಗತಿಗಳನ್ನು ದೇವಿ ಶೆಟ್ಟಿ ಅವರ ಹೆಸರಲ್ಲಿ ಹರಿಬಿಡಲಾಗಿದೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...